ಉದ್ಧವ್ ಠಾಕ್ರೆ 
ದೇಶ

'ಮುಂಬೈಗೆ ಬಂದು ನನ್ನೊಂದಿಗೆ ಮಾತನಾಡಿ': ಗುವಾಹಟಿಯಲ್ಲಿರುವ ಬಂಡಾಯ ಶಿವಸೇನಾ ಶಾಸಕರಿಗೆ ಉದ್ಧವ್ ಠಾಕ್ರೆ ಮನವಿ

ಮುಂಬೈಗೆ ವಾಪಸ್ಸಾಗಿ ನನ್ನೊಂದಿಗೆ ಮಾತನಾಡಿ ಎಂದು ಗುವಾಹಟಿಯಲ್ಲಿರುವ ತಮ್ಮ ಪಕ್ಷದ ಬಂಡಾಯ ಶಾಸಕರಿಗೆ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮಂಗಳವಾರ ಮನವಿ ಮಾಡಿದ್ದಾರೆ.

ಮುಂಬೈ: ಮುಂಬೈಗೆ ವಾಪಸ್ಸಾಗಿ ನನ್ನೊಂದಿಗೆ ಮಾತನಾಡಿ ಎಂದು ಗುವಾಹಟಿಯಲ್ಲಿರುವ ತಮ್ಮ ಪಕ್ಷದ ಬಂಡಾಯ ಶಾಸಕರಿಗೆ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಮಂಗಳವಾರ ಮನವಿ ಮಾಡಿದ್ದಾರೆ.

ಇದು ಮತ್ತಷ್ಟ ವಿಳಂಬವಾರದು. ನೀವು ಮುಂಬೈಗೆ ವಾಪಸ್ಸಾಗಿ ನನ್ನೊಂದಿಗೆ ಕುಳಿತು ಮಾತನಾಡುವುದರೊಂದಿಗೆ ಶಿವಸೇನಾ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ತೊಡೆದುಹಾಕಬೇಕೆಂದು ಠಾಕ್ರೆ ಉಲ್ಲೇಖಿಸಿರುವುದಾಗಿ ಅವರ ಆಪ್ತರೊಬ್ಬರು ತಿಳಿಸಿದ್ದಾರೆ.

ನೀವು ವಾಪಸ್ಸಾಗಿ ನನನ್ನು ಭೇಟಿಯಾದರೆ, ಕೆಲವೊಂದು ಪರ್ಯಾಯ ಆಯ್ಕೆಗಳನ್ನು ಹುಡುಕಬಹುದು. ಪಕ್ಷದ ಅಧ್ಯಕ್ಷನಾಗಿ ಮತ್ತು ಕುಟುಂಬದ ಮುಖ್ಯಸ್ಥನಾಗಿ ಈಗಲೂ ನಿಮ್ಮ ಬಗ್ಗೆ ಕಾಳಜಿಯಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಗುವಾಹಟಿಯಲ್ಲಿರುವ ಬಂಡಾಯ ಶಾಸಕರ ಗುಂಪಿನಲ್ಲಿರುವ ಕೆಲ ಶಾಸಕರು ಶಿವಸೇನಾ ನಾಯಕರೊಂದಿಗೆ ಸಂಪರ್ಕದಲ್ಲಿದ್ದು,  ಏಕನಾಥ್ ಶಿಂಧೆ ಅವರಲ್ಲಿಯೂ ಆತಂಕವಿದೆ ಎಂಬ ವರದಿಗಳ ಬೆನ್ನಲ್ಲೇ, ಉದ್ದವ್ ಠಾಕ್ರೆ ಈ ರೀತಿಯ ಹೇಳಿಕೆ ನೀಡಿದ್ದಾರೆ. 

ತಮ್ಮೊಂದಿಗೆ 50 ಶಾಸಕರಿದ್ದಾರೆ. ನಿಮ್ಮೊಂದಿಗೆ ಎಷ್ಟು ಸಂಖ್ಯೆಯ ಶಾಸಕರಿದ್ದಾರೆ ಎಂಬುದನ್ನು ಬಹಿರಂಗಪಡಿಸುವಂತೆ ಏಕನಾಥ್ ಶಿಂಧೆ ಮಂಗಳವಾರ ಸವಾಲು ಹಾಕಿದ್ದ ಏಕನಾಥ್ ಶಿಂಧೆ, ನಾವು ಶಿವಸೇನಾದಲ್ಲಿದ್ದೇವೆ. ಪಕ್ಷವನ್ನು ಮುನ್ನಡೆಸಿಕೊಂಡು ಹೋಗುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.

ಇಲ್ಲಿ ಎಲ್ಲ ಶಾಸಕರು ಸಂತೋಷದಿಂದ ಇದ್ದಾರೆ. ಶಾಸಕರು ನಮ್ಮೊಂದಿಗೆ ಇದ್ದಾರೆ. ಒಂದು ವೇಳೆ ಶಿವಸೇನಾ ನಾಯಕರು ಇಲ್ಲಿರುವ ಶಾಸಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳುವುದಾದರೆ ಅವರ ಹೆಸರನ್ನು ಬಹಿರಂಗಪಡಿಸಲಿ ಎಂದು ಅವರು ಹೇಳಿದ್ದಾರೆ. 

ಈ ಮಧ್ಯೆ ಮಹಾ ಆಘಾದಿ ಸರ್ಕಾರ ಅಗತ್ಯ ಶಾಸಕರ ಕೊರತೆಯನ್ನು ಘೋಷಿಸುವುದಕ್ಕಾಗಿ ಕೇಸರಿ ಪಕ್ಷ ಕಾಯುತ್ತಿರುವುದಾಗಿ ಹಿರಿಯ ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವಾರ್ ಮಂಗಳವಾರ ಸಲಹೆ ನೀಡಿದ್ದಾರೆ. ಬಿಜೆಪಿ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಸದನದಲ್ಲಿ ಬಹುಮತವನ್ನು ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT