ಏಕನಾಥ್ ಶಿಂಧೆ 
ದೇಶ

'ನಮ್ಮ ಜೊತೆ 50 ಶಾಸಕರು ಇದ್ದಾರೆ, ಸದ್ಯದಲ್ಲೇ ಮುಂಬೈಗೆ ಹೋಗುತ್ತೇವೆ': ಗುವಾಹಟಿ ಹೊಟೇಲ್ ನಲ್ಲಿ ಏಕನಾಥ್ ಶಿಂಧೆ ಹೇಳಿಕೆ

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರದ ಅನಿಶ್ಚಿತತೆಗೆ ಕಾರಣವಾಗಿ ಬಂಡಾಯವೆದ್ದು ತಮ್ಮ ಶಾಸಕರೊಂದಿಗೆ ಗುವಾಹಟಿ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ.

ಗುವಾಹಟಿ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (MVA) ಸರ್ಕಾರದ ಅನಿಶ್ಚಿತತೆಗೆ ಕಾರಣವಾಗಿ ಬಂಡಾಯವೆದ್ದು ತಮ್ಮ ಶಾಸಕರೊಂದಿಗೆ ಗುವಾಹಟಿ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ.

ತಾವು ಬೀಡುಬಿಟ್ಟಿರುವ ಹೊಟೇಲ್ ನ ಹೊರಗೆ ಮಾತನಾಡಿರುವ ಅವರು, ನಾವೆಲ್ಲರೂ ಮುಂಬೈಗೆ ಹೋಗುತ್ತಿದ್ದೇವೆ. ನಮ್ಮ ಬಳಿ ಈಗ 50 ಶಾಸಕರಿದ್ದಾರೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸ ಮತಕ್ಕಾಗಿ ಒತ್ತಾಯಿಸಲು ಶಿಂಧೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡುತ್ತಾರೆ ಎಂಬ ಊಹಾಪೋಹಗಳಿವೆ.

ಇಂದು ಅವರು ತನಗೆ 50 ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮೊಂದಿಗೆ ಸೇರಿರುವ ಶಾಸಕರ ಸಂಖ್ಯೆಯನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ. "ನಾವು ಶಿವಸೇನೆಯಲ್ಲಿದ್ದೇವೆ, ನಾವು ಪಕ್ಷವನ್ನು ಮುನ್ನಡೆಸುತ್ತಿದ್ದೇವೆ, ಅದರಲ್ಲಿ ಯಾವುದೇ ಅನುಮಾನ ಬೇಡ, ನಮ್ಮ ಮುಂದಿನ ಕ್ರಮ ಬಗ್ಗೆ ನಿಮಗೆ ತಿಳಿಸುತ್ತೇವೆ ಎಂದಿದ್ದಾರೆ. 

ಇಲ್ಲಿರುವ ಯಾವುದೇ ಶಾಸಕರನ್ನು ನಿಮಗೆ ಹತ್ತಿಕ್ಕಲು ಸಾಧ್ಯವಿಲ್ಲ. ಇಲ್ಲಿ ಎಲ್ಲರೂ ಸಂತೋಷವಾಗಿದ್ದಾರೆ, ಶಾಸಕರು ನಮ್ಮೊಂದಿಗಿದ್ದಾರೆ, ಇಲ್ಲಿರುವ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನೆ ಹೇಳಿದರೆ, ಅವರ ಹೆಸರನ್ನು ಬಹಿರಂಗಪಡಿಸಿ ಎಂದು ಕೂಡ ಏಕನಾಥ್ ಶಿಂಧೆ ಉದ್ಧವ್ ಠಾಕ್ರೆ ಬಣಕ್ಕೆ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT