ಸಂಗ್ರಹ ಚಿತ್ರ 
ದೇಶ

'ಮಹಾ' ರಾಜಕೀಯ ಬಿಕ್ಕಟ್ಟು: ಮುಂಬೈ ಹೋಟೆಲ್'ಗೆ ಬರುವಂತೆ ಶಾಸಕರಿಗೆ ಬಿಜೆಪಿ ಸೂಚನೆ, ಬಂಡಾಯ ನಾಯಕರು ಗೋವಾಗೆ ಶಿಫ್ಟ್

ಮುಂಬೈ ತಾಜ್ ಪ್ರೆಸಿಡೆಂಟ್ ಹೋಟೆಲ್'ಗೆ ಬರುವಂತೆ ಮಹಾರಾಷ್ಟ್ರದಲ್ಲಿರುವ ತನ್ನ ಎಲ್ಲಾ ಶಾಸಕರಿಗೆ ಬಿಜೆಪಿ ಸೂಚನೆ ನೀಡಿದೆ ಎಂದು ಮೂಲಗಳಿಂದ ಬುಧವಾರ ತಿಳಿದುಬಂದಿದೆ.

ಮುಂಬೈ: ಮುಂಬೈ ತಾಜ್ ಪ್ರೆಸಿಡೆಂಟ್ ಹೋಟೆಲ್'ಗೆ ಬರುವಂತೆ ಮಹಾರಾಷ್ಟ್ರದಲ್ಲಿರುವ ತನ್ನ ಎಲ್ಲಾ ಶಾಸಕರಿಗೆ ಬಿಜೆಪಿ ಸೂಚನೆ ನೀಡಿದೆ ಎಂದು ಮೂಲಗಳಿಂದ ಬುಧವಾರ ತಿಳಿದುಬಂದಿದೆ. 

ಆದಷ್ಟು ಬೇಗ ಬಹುಮತ ಸಾಬೀತು ಪಡಿಸುವಂತೆ ಮಹಾವಿಕಾಸ್ ಅಘಾಡಿ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಬಿಜೆಪಿ ಈ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. 

ಫಡ್ನವೀಸ್ ಸಭೆ
ವಿಶ್ವಾಸ ಮತಯಾಚನೆಗೆ ರಾಜ್ಯಪಾಲರು ಠಾಕ್ರೆಗೆ ಸೂಚನೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ತಮ್ಮ ನಿವಾಸದಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ಕರೆದಿದ್ದಾರೆಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಸಭೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. 

ಇಂದು ಗೋವಾಗೆ ಶಿವಸೇನೆ ಬಂಡಾಯ ನಾಯಕರು...
ಈ ನಡುವೆ ಅಸ್ಸಾಂನ ಗುವಾಹಟಿಯಲ್ಲಿರುವ ಶಿವಸೇನೆ ಬಂಡಾಯ ಶಾಸಕರು ಇಂದು ಗೋವಾಗೆ ತೆರಳುತ್ತಿದ್ದಾರೆಂದು ಹೇಳಲಾಗುತ್ತಿದೆ. 

ಗೋವಾದ ರಾಜ್ ರೆಸಾರ್ಟ್ ಆ್ಯಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ಈಗಾಗಲೇ 70 ರೂಮ್ ಗಳು ಬುಕ್ ಆಗಿದ್ದು, ಗೋವಾಗೆ ತೆರಳಿದ ಬಳಿಕ ಅಲ್ಲಿಂದ ನೇರವಾಗಿ ನಾಳೆ ಮಹಾರಾಷ್ಟ್ರ ವಿಧಾನಸಭೆಗೆ ಹಾಜರಾಗಲಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT