ಎನ್ಐಎ ಅಧಿಕಾರಿಗಳ ಸಾಂದರ್ಭಿಕ ಚಿತ್ರ 
ದೇಶ

ಉದಯ್ ಪುರ ಹತ್ಯೆ ಪ್ರಕರಣ: ಜನರಲ್ಲಿ ಭಯ ಸೃಷ್ಟಿಸುವ ಉದ್ದೇಶ; ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿದ ಎನ್ಐಎ

ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಭೀಕರ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ದೇಶದ ಜನರಲ್ಲಿ ಭಯ ಉಂಟುಮಾಡುವುದು ಈ ಹತ್ಯೆಯ ಉದ್ದೇಶವಾಗಿತ್ತು ಎಂದು ಹೇಳಿದೆ. 

ನವದೆಹಲಿ: ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಭೀಕರ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ದೇಶದ ಜನರಲ್ಲಿ ಭಯ ಉಂಟುಮಾಡುವುದು ಈ ಹತ್ಯೆಯ ಉದ್ದೇಶವಾಗಿತ್ತು ಎಂದು ಹೇಳಿದೆ. 

ಸಂಸ್ಥೆಯ ವಕ್ತಾರರು ಮಾತನಾಡಿ, ತನಿಖಾ ತಂಡ ಉದಯ್ ಪುರಕ್ಕೆ ಈಗಾಗಲೇ ತೆರಳಿದ್ದು ತ್ವರಿತ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ. ಹಂತಕರು ಸಾಮಾಜಿಕ ಜಾಲತಾಣದಲ್ಲಿ ಹತ್ಯೆಗೆ ತಾವೇ ಹೊಣೆ ಹೊತ್ತಿದ್ದು, ಜನರಿಗೆ ಭಯ ಮೂಡಿಸಲು ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. 

ಯುಎಪಿಎ ತಡೆ ಕಾಯ್ದೆಯ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ಪ್ರಾರಂಭದಲ್ಲಿ ಪ್ರಕರಣವನ್ನು ಧನ್ಮಂಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು.

ಇದನ್ನೂ ಓದಿ: ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ  ಎಎಸ್ಐ ಅಮಾನತು
 
ಕನ್ಹಯ್ಯ ಲಾಲ್ ಭೀಕರ ಹತ್ಯೆಗೆ ಯೋಜನೆ ರೂಪಿಸಿದ ಆರೋಪದಡಿ ಐಪಿಸಿ ಸೆಕ್ಷನ್ 452, 302, 152 (ಎ) 153 (ಬಿ), 295 (A) 34ರ ಅಡಿಯಲ್ಲಿ ಹಾಗೂ ಯುಎಪಿಎಯ ಸೆಕ್ಷನ್ 16,18, 20, ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT