ಅಶೋಕ್ ಗೆಹ್ಲೋಟ್ 
ದೇಶ

ಟೈಲರ್ ಹತ್ಯೆ ಪ್ರಕರಣ: ಇದು ಸಾಮಾನ್ಯ ಘಟನೆಯಲ್ಲ, ಹತ್ಯೆ ಹಿಂದಿನ ಪಿತೂರಿ ಶೀಘ್ರದಲ್ಲೇ ಬಹಿರಂಗ- ರಾಜಸ್ಥಾನ ಸಿಎಂ

ಟೈಲರ್ ಕನ್ನಯ್ಯಾ ಲಾಲ್ ಶಿರಚ್ಛೇದ ಮಾಡಿರುವ ಘಟನೆ ಸಾಮಾನ್ಯ ಘಟನೆಯಲ್ಲ. ಹತ್ಯೆ ಹಿಂದಿರುವ ಪಿತೂರಿಯನ್ನು ಕಂಡುಹಿಡಿಯಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.

ಜೈಪುರ: ಟೈಲರ್ ಕನ್ನಯ್ಯಾ ಲಾಲ್ ಶಿರಚ್ಛೇದ ಮಾಡಿರುವ ಘಟನೆ ಸಾಮಾನ್ಯ ಘಟನೆಯಲ್ಲ. ಹತ್ಯೆ ಹಿಂದಿರುವ ಪಿತೂರಿಯನ್ನು ಕಂಡುಹಿಡಿಯಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಾಮಾನ್ಯ ಘಟನೆಯಲ್ಲ. ಹತ್ಯೆ ಹಿಂದಿರುವ ಪಿತೂರಿ ಹಾಗೂ ಲಿಂಕ್ ಗಳನ್ನು ಕಂಡು ಹಿಡಿಯಲಾಗುವುದು. ಘಟನೆ ಸಂಬಂಧ ಸಭೆ ಕರೆಯಲಾಗಿದ್ದು, ಸಭೆ ಬಳಿಕ ಮಾಹಿತಿಗಳನ್ನು ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ. 

ರಾಜ್ಯಸ್ಥಾನದ ಹೆಚ್ಚುವರಿ (ಎಸಿಬಿ) ಡಿಜಿಪಿ ದಿನೇಶ್ ಎಂಎನ್ ಅವರು ಮಾತನಾಡಿ, ಪ್ರಕರಣ ಸಂಬಂಧ ಬಂಧಿತನಾಗಿರುವ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದೆ. ಆತ ನೀಡಿದ ಮಾಹಿತಿ ಮೇರೆಗೆ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧವೂ ಕ್ರಮ ಕೈಗಳ್ಳಲಾಗುವುದು. ಮೃತರ ಕುಟುಂಬಕ್ಕೆ ಶೀಘ್ರದಲ್ಲೇ ಪರಿಹಾರವನ್ನೂ ನೀಡಲಾಗುವುದು. ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿ ಶಾಂತಿಯುತವಾಗಿದ್ದು, ಜನರೂ ಕೂಡ ಶಾಂತಿಯನ್ನು ಕಾಪಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT