ಅಮರನಾಥ ಯಾತ್ರಿಕರು 
ದೇಶ

ಅಮರನಾಥ ಯಾತ್ರೆ ಇಂದು ಆರಂಭ: ನುನ್ವಾನ್ ಮೂಲ ಶಿಬಿರದಿಂದ 2,750 ಯಾತ್ರಿಕರ ತಂಡ ಪಯಣ

ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಇಂದು ಗುರುವಾರ ಪ್ರಾರಂಭವಾಗಿದೆ. 2,750 ಯಾತ್ರಾರ್ಥಿಗಳ ತಂಡ ಇಂದು ನಸುಕಿನ ಜಾವ ಮೂಲ ಶಿಬಿರದಿಂದ ಹೊರಟಿದ್ದು ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನ ನುನ್ವಾನ್ ಮೂಲ ಶಿಬಿರದಿಂದ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲ ಯಾತ್ರೆಗೆ ಚಾಲನೆ ನೀಡಿದರು.

ಜಮ್ಮು: ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಇಂದು ಗುರುವಾರ ಪ್ರಾರಂಭವಾಗಿದೆ. 2,750 ಯಾತ್ರಾರ್ಥಿಗಳ ತಂಡ ಇಂದು ನಸುಕಿನ ಜಾವ ಮೂಲ ಶಿಬಿರದಿಂದ ಹೊರಟಿದ್ದು ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನ ನುನ್ವಾನ್ ಮೂಲ ಶಿಬಿರದಿಂದ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲ ಯಾತ್ರೆಗೆ ಚಾಲನೆ ನೀಡಿದರು.

ಅಮರನಾಥ ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾಶ್ಮೀರ ಕಣಿವೆಯಲ್ಲಿ ನಿನ್ನೆ ಹಸಿರು ನಿಶಾನೆ ತೋರಿದ್ದರು. ಬಿಗಿ ಭದ್ರತಾ ವ್ಯವಸ್ಥೆ ನಡುವೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆ ಆರಂಭವಾಯಿತು. ಕಾಶ್ಮೀರ ಕಣಿವೆಯಲ್ಲಿರುವ ಅಮರನಾಥ ಗುಹ ದೇವಾಲಯಕ್ಕೆ ಈ ವರ್ಷದ 43 ದಿನಗಳ ವಾರ್ಷಿಕ ಯಾತ್ರೆ ಇಂದಿನಿಂದ ಕಾಶ್ಮೀರ ಕಣಿವೆಯ ಪಹಲ್‌ಗಾಮ್ ಮತ್ತು ಬಲ್‌ತಾಲ್ ಮಾರ್ಗಗಳಿಂದ ಆರಂಭವಾಗಲಿದೆ.

ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಮಂಜುಗಡ್ಡೆಯಿಂದ ನಿರ್ಮಿತವಾಗಿರುವ ಲಿಂಗದ ದರ್ಶನವನ್ನು ಮಾಡುವ ಪವಿತ್ರ ಯಾತ್ರೆ ಅಮರನಾಥ ಯಾತ್ರೆ ಅತ್ಯಂತ ಜನಪ್ರಿಯ, ಪ್ರತಿವರ್ಷ ಸಾವಿರಾರು ಮಂದಿ ಯಾತ್ರಿಕರು ಭೇಟಿ ನೀಡುತ್ತಾರೆ. ಶೀಶ್ನಗ್ ಮತ್ತು ಪಂಚತರ್ನಿ ಮಾರ್ಗವಾಗಿ ಬಹುತೇಕ ಕಾಲ್ನಡಿಗೆಯಲ್ಲಿ ಹೋಗುವ ಯಾತ್ರೆಗೆ ಮೂರು ದಿನ ರಾತ್ರಿ ಹಗಲು ತೆಗೆದುಕೊಳ್ಳುತ್ತದೆ.

43 ದಿನಗಳ ಅಮರನಾಥ ಯಾತ್ರೆ ಸುಗಮವಾಗಿ ಸಾಗಲು ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿದೆ. ಯಾತ್ರಿಗಳು ಶಾಂತಿಯಿಂದ ಸುಲಭವಾಗಿ ಭದ್ರತೆ, ಸುರಕ್ಷತೆಯೊಂದಿಗೆ ಹೋಗುವುದು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅಮರನಾಥ ದೇಗುಲ ಮಂಡಳಿ(sasb) ಭಕ್ತಾದಿಗಳಿಗೆ ಆನ್ ಲೈನ್ ದರ್ಶನಕ್ಕೆ ವ್ಯವಸ್ಥೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT