ಏಕನಾಥ್ ಶಿಂಧೆ, ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ 
ದೇಶ

ಮಹಾರಾಷ್ಟ್ರ: ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ ಶಿವಸೇನಾ-ಬಿಜೆಪಿ  ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ ಶಿವಸೇನಾ-ಬಿಜೆಪಿ  ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ರಾಜಭವನದಲ್ಲಿ ಇಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ, ಬಿಜೆಪಿಯ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಪ್ರಮಾಣ ವಚನ ಬೋಧಿಸಿದರು.

ಈ ಮೂಲಕ  ಒಂದು ಕಾಲದಲ್ಲಿ ಆಟೋ ಡ್ರೈವರ್ ಆಗಿದ್ದ ಏಕನಾಥ್ ಶಿಂಧೆ, ಶಿವಸೇನಾ ಮುಖ್ಯಸ್ಥ ಹಾಗೂ ತನ್ನ ಗುರು ಉದ್ಧವ್ ಠಾಕ್ರೆಯನ್ನು ರಾಜಕಾರಣದಲ್ಲಿ ಹಿಂದಿಕ್ಕಿ ಇದೀಗ ಮಹಾರಾಷ್ಟ್ರದ ಸಿಎಂ ಆಗಿ ಹೊರಹೊಮ್ಮಿದ್ದಾರೆ.

ನಾಲ್ಕು ಬಾರಿ ಶಾಸಕರು, ಎರಡು ಬಾರಿ ಸಚಿವರಾಗಿದ್ದ ಶಿಂಧೆ, ಜನ ಹಾಗೂ ಕಾರ್ಯಕ್ರಮ ಸಂಘಟಿಸುವ ಕೌಶಲ್ಯದೊಂದಿಗೆ ಹಂತ ಹಂತವಾಗಿ ರಾಜಕೀಯದಲ್ಲಿ ಉನ್ನತ ಹುದ್ದೆಗೇರುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT