ದ್ರೌಪದಿ ಮುರ್ಮು 
ದೇಶ

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು, ಯಶವಂತ ಸಿನ್ಹಾ ನಾಮಪತ್ರ ಕ್ರಮಬದ್ಧ- ಚುನಾವಣಾಧಿಕಾರಿ

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ರಾಜ್ಯಸಭಾ ಕಾರ್ಯದರ್ಶಿ ಗುರುವಾರ ಹೇಳಿದ್ದಾರೆ.

ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ರಾಜ್ಯಸಭಾ ಕಾರ್ಯದರ್ಶಿ ಗುರುವಾರ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆಗಾಗಿ ಸ್ವೀಕೃತವಾದ 115 ನಾಮಪತ್ರಗಳ ಪೈಕಿ, 28 ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿಯೂ ಆಗಿರುವ ರಾಜ್ಯ ಸಭಾ ಪ್ರಧಾನ ಕಾರ್ಯದರ್ಶಿ ಪಿ. ಸಿ ಮೊದಿ ತಿಳಿಸಿದ್ದಾರೆ.  115 ನಾಮಪತ್ರಗಳ ಪೈಕಿ ಉಳಿದಿದ್ದ 72 ಅಭ್ಯರ್ಥಿಗಳ 87 ನಾಮಪತ್ರಗಳಲ್ಲಿ  ಅಗತ್ಯ ಅರ್ಹತೆ ಹೊಂದಿಲ್ಲದ ಕಾರಣ 79 ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ
 
ಜುಲೈ 2 ರಂದು ನಾಮಪತ್ರ ಹಿಂಪಡೆಯಲು ಕಡೆಯೇ ದಿನವಾಗಿದ್ದು, ತದನಂತರ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಗೆಜೆಟ್ ನಲ್ಲಿ ಪ್ರಕಟಿಸಲಾಗುವುದು, ಮುರ್ಮು, ಯಶವಂತ ಸಿನ್ಹಾ ಅವರಲ್ಲದೇ, ಮುಂಬೈಯ ಕೊಳಗೇರಿಯ ನಿವಾಸಿ ಸೇರಿದಂತೆ ಜನಸಾಮಾನ್ಯರು ಕೂಡಾ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. 

ನಾಮಪತ್ರ ಸಲ್ಲಿಸುವವರಿಗೆ ಕನಿಷ್ಠ 50 ಚುನಾಯಿತ ಪ್ರತಿನಿಧಿಗಳು ಸೂಚಕರಾಗಿ, ಇತರ 50 ಮಂದಿ ದ್ವಿತೀಯ ಸೂಚಕರಾಗಿ ಇರುವಂತೆ  ಚುನಾವಣಾ ಆಯೋಗ ಕಡ್ಡಾಯಪಡಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT