ಕಾಂಗ್ರೆಸ್ ಸಾಂದರ್ಭಿಕ ಚಿತ್ರ 
ದೇಶ

ಉದ್ಧವ್ ಠಾಕ್ರೆ ಸರ್ಕಾರ ಪತನದೊಂದಿಗೆ ಮತ್ತೊಂದು ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ 

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಆಘಾದಿ ಸರ್ಕಾರ ಪತನದೊಂದಿಗೆ ಇದೀಗ ಮತ್ತೊಂದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.  ರಾಜಸ್ಥಾನ, ಛತ್ತೀಸ್ ಗಢದಲ್ಲಿ ಮಾತ್ರ ತನ್ನ ಸ್ವಂತ ಸಾಮರ್ಥ್ಯದೊಂದಿಗೆ ಆಡಳಿತ ನಡೆಸುತ್ತಿದ್ದು, ಜಾರ್ಖಂಡ್ ನಲ್ಲಿ ಜೆಎಂಎಂ ಮತ್ತು ಆರ್ ಜೆಡಿಯೊಂದಿಗೆ ಮೈತ್ರಿ  ಮಾಡಿಕೊಂಡಿದೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಆಘಾದಿ ಸರ್ಕಾರ ಪತನದೊಂದಿಗೆ ಇದೀಗ ಮತ್ತೊಂದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.  ರಾಜಸ್ಥಾನ, ಛತ್ತೀಸ್ ಗಢದಲ್ಲಿ ಮಾತ್ರ ತನ್ನ ಸ್ವಂತ ಸಾಮರ್ಥ್ಯದೊಂದಿಗೆ ಆಡಳಿತ ನಡೆಸುತ್ತಿದ್ದು, ಜಾರ್ಖಂಡ್ ನಲ್ಲಿ ಜೆಎಂಎಂ ಮತ್ತು ಆರ್ ಜೆಡಿಯೊಂದಿಗೆ ಮೈತ್ರಿ  ಮಾಡಿಕೊಂಡಿದೆ.

ಇದೇ ವರ್ಷದ  ಆರಂಭದಲ್ಲಿ ನಡೆದ ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ್, ಗೋವಾ ಮತ್ತು ಪಂಜಾಬ್  ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಮಹಾರಾಷ್ಟ್ರದಲ್ಲಿನ ಬೆಳವಣಿಗೆ ಮತ್ತಷ್ಟು ಹೊಡೆತ ನೀಡಿದೆ.

ಉತ್ತರಾಖಂಡ್, ಗೋವಾ ಮತ್ತು ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆಯನ್ನು ಪರಿಣಾಮಕಾರಿಯಾಗಿ  ಬಳಸಿಕೊಳ್ಳುವಲ್ಲಿ ವಿಫಲವಾದ ಕಾಂಗ್ರೆಸ್, ಪಂಜಾಬ್ ನಲ್ಲೂ ಅಧಿಕಾರ ಕಳೆದುಕೊಂಡಿತು.

ಕಳೆದ ವರ್ಷ ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ಚುನಾವಣೆಯಲ್ಲೂ ಕಳಪೆ ಪ್ರದರ್ಶನ ತೋರಿದ ಕಾಂಗ್ರೆಸ್  ತಮಿಳುನಾಡಿನಲ್ಲಿ ಮೈತ್ರಿ ಪಕ್ಷ ಡಿಎಂಕೆಯೊಂದಿಗೆ  ಗೆಲುವು ಸಾಧಿಸುವಲ್ಲಿ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗಿದ್ದರೂ ಅಲ್ಲಿನ ಸರ್ಕಾರದಲ್ಲಿ ಸೇರಿಲ್ಲ.

ಕಳೆದ ಕೆಲವು ತಿಂಗಳುಗಳಲ್ಲಿ ಮಾಜಿ ಕೇಂದ್ರ ಸಚಿವರಾದ ಅಶ್ವನಿ ಕುಮಾರ್, ಆರ್ ಪಿಎನ್ ಸಿಂಗ್, ಪಂಜಾಬ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಜಾಕರ್, ಗುಜರಾತ್ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಪಕ್ಷ ತೊರೆದಿದ್ದು, ಕರ್ನಾಟಕ, ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಆದಂತೆ ಮಹಾರಾಷ್ಟ್ರದಲ್ಲೂ  ಬಂಡಾಯ ಶಾಸಕರಿಂದ ಸರ್ಕಾರ ಪತನವಾಗಿರುವುದಾಗಿ ಕಾಂಗ್ರೆಸ್ ಪಕ್ಷದೊಳಗಿನ ಮುಖಂಡರು ಹೇಳುತ್ತಿದ್ದಾರೆ.

ಮುಂಬರುವ ರಾಜಸ್ಥಾನ, ಛತ್ತೀಸ್ ಗಢ, ಮಧ್ಯಪ್ರದೇಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಮರ್ಪಕ ರೀತಿಯಲ್ಲಿ ಪಕ್ಷ ಸಂಘಟನೆ ಹಾಗೂ ನಿರ್ವಹಣೆ ಮಾಡದಿದ್ದಲ್ಲಿ ಈ ರಾಜ್ಯಗಳನ್ನೂ ಕಳೆದುಕೊಳ್ಳುವಲ್ಲಿ ಅಚ್ಚರಿಪಡಬೇಕಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT