ಪ್ರಧಾನಿ ನರೇಂದ್ರ ಮೋದಿ 
ದೇಶ

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ- ಪ್ರಧಾನಿ ನರೇಂದ್ರ ಮೋದಿ

ಇಂದು ಪ್ರಕಟವಾಗಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ  2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಇಂದು ಪ್ರಕಟವಾಗಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ  2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ  ಬಿಜೆಪಿ ಕೇಂದ್ರ ಕಚೇರಿಯಲ್ಲಿ ನೆರೆದಿದ್ದ ಬೃಹತ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ, ಉತ್ತರ ಪ್ರದೇಶದಲ್ಲಿ 2017ರಲ್ಲಿ ಗೆಲುವು ಸಾಧಿಸಿದ್ದರಿಂದ 2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಯಿತು ಎಂದು ತಜ್ಞರು ಹೇಳಿದ್ದರು. 2022ರ ಚುನಾವಣೆ 2024ರ ಲೋಕಸಭಾ ಚುನಾವಣೆಯನ್ನು ನಿರ್ಧರಿಸಲಿದೆ ಎಂದು ಅದೇ ತಜ್ಞರು ಹೇಳುವ ವಿಶ್ವಾಸವಿದೆ ಎಂದರು.

ಪಂಜಾಬಿನಲ್ಲಿಯೂ ಪಕ್ಷ ಬೆಳವಣಿಗೆಯಾಗುತ್ತಿರುವುದನ್ನು ನೋಡುತ್ತಿದ್ದೇನೆ. ಅಲ್ಲಿನ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಪಂಜಾಬಿನಲ್ಲಿ ಈ ರೀತಿಯಲ್ಲಿ ಬಿಜೆಪಿಯನ್ನು ಮುಂದಕ್ಕೆ ತಂದಿರುವುದು ಶ್ಲಾಘನೀಯವಾಗಿದೆ. ಮುಂಬರುವ ವರ್ಷಗಳಲ್ಲಿ  ಬಿಜೆಪಿ ಬೆಳವಣಿಗೆಯನ್ನು ಅಲ್ಲಿಯೂ ನೋಡುವುದಾಗಿ ಹೇಳಿದರು.

ಪಂಜಾಬಿನಲ್ಲಿ ತಳಮಟ್ಟಕ್ಕೂ ನಮ್ಮ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ತಲುಪಿಸಲಾಗುವುದು. ಬಡವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವವರೆಗೂ ವಿರಾಮಿಸುವುದಿಲ್ಲ ಎಂದು ಮೋದಿ ತಿಳಿಸಿದರು.

ರಷ್ಯಾ- ಉಕ್ರೇನ್ ಯುದ್ಧದ ನಂತರ ನಾವು ಆಮದು ಮಾಡಿಕೊಳ್ಳುತ್ತಿದ್ದ ಸೂರ್ಯಕಾಂತಿ ಅಡುಗೆ ಎಣ್ಣೆ, ಕಲ್ಲಿದ್ದಲು , ಗ್ಯಾಸ್, ರಸಗೊಬ್ಬರ ದರದಲ್ಲಿ ಏರಿಕೆಯಾಗಿದೆ. ಭಾರತ ಶಾಂತಿಯನ್ನು ಬಯಸುತ್ತದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ನರೇಂದ್ರ ಮೋದಿ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT