ಅಸಾದುದ್ದೀನ್ ಒವೈಸಿ 
ದೇಶ

'ಸೋತಿದ್ದಕ್ಕೆ ಇವಿಎಂ ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಜನರ ಮನಸಲ್ಲಿರುವ ಚಿಪ್; 80-20 ಅನುಪಾತ ಕಾರ್ಯ ನಿರ್ವಹಿಸಿದೆ': ಒವೈಸಿ

ಉತ್ತರಪ್ರದೇಶ ಚುನಾವಣಾ ಫಲಿತಾಂಶಕ್ಕೆ ಇವಿಎಂ ಅನ್ನು ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಇವಿಎಂ ಚಿಪ್ ಅಲ್ಲ.. ಬದಲಿಗೆ ಜನರ ಮನಸಲ್ಲಿರುವ ಚಿಪ್ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಹೇಳಿದ್ದಾರೆ.

ನವದೆಹಲಿ: ಉತ್ತರಪ್ರದೇಶ ಚುನಾವಣಾ ಫಲಿತಾಂಶಕ್ಕೆ ಇವಿಎಂ ಅನ್ನು ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಇವಿಎಂ ಚಿಪ್ ಅಲ್ಲ.. ಬದಲಿಗೆ ಜನರ ಮನಸಲ್ಲಿರುವ ಚಿಪ್ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಹೇಳಿದ್ದಾರೆ.

ಉತ್ತರ ಪ್ರದೇಶದ ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮಾತನಾಡಿದ ಅಸಾದುದ್ದೀನ್ ಓವೈಸಿ, ನಾವು ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ. ಉಳಿದ ಸೋತ ರಾಜಕೀಯ ಪಕ್ಷಗಳು ತಮ್ಮ ಸೋಲಿಗೆ ಇವಿಎಂ ಯಂತ್ರವನ್ನು ಹೊಣೆ ಮಾಡಲು ಯತ್ನಿಸುತ್ತಿವೆ. ಆದರೆ ಖಂಡಿತ ಇದು ಇವಿಎಂ ದೋಷದಿಂದ ಆದ ಸೋಲಲ್ಲ. ಜನರ ಮನಸಲ್ಲಿರುವ ಚಿಪ್​​ನಿಂದ ಹೊರಬಿದ್ದ ಫಲಿತಾಂಶ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಮತ್ತೆ ನಾವು ನಾಳೆಯಿಂದ ನಮ್ಮ ಕೆಲಸದಲ್ಲಿ ತೊಡಗುತ್ತೇವೆ. ಮುಂದಿನ ಚುನಾವಣೆಯಲ್ಲಿ ನಾವು ಖಂಡಿತ ಯಶಸ್ಸು ಕಾಣುತ್ತೇವೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಅಲ್ಪಸಂಖ್ಯಾತರನ್ನು ಮತಬ್ಯಾಂಕ್​ಗಳಾಗಿ ಬಳಸಿಕೊಳ್ಳಲಾಗುತ್ತಿದೆ. ಲಖಿಂಪುರ ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ಕಾರು ಹರಿಸಿದ್ದು ಬಿಜೆಪಿ ಸಚಿವರ ಪುತ್ರನೇ ಆದರೂ ಅಲ್ಲಿಯೂ ಬಿಜೆಪಿಯೇ ಗೆದ್ದಿದೆ. ಇಲ್ಲಿ ಕೆಲಸ ಮಾಡುತ್ತಿರುವುದು 80-20 ರ ನಿಯಮವಷ್ಟೇ. ಈ 80-20ರ ರೂಲ್ಸ್​ ಇನ್ನೂ ಕೆಲ ವರ್ಷಗಳ ಕಾಲ ಹಾಗೇ ಇರಲಿದೆ.  ಅದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಏನೇ ಆಗಲಿ ನಮ್ಮಲ್ಲಿ ಉತ್ಸಾಹ ಕುಂದಲಿಲ್ಲ. ಅದಿನ್ನೂ ಹೆಚ್ಚಾಗಿದೆ ಎಂದು ಹೇಳಿದ್ದಾರೆ. 

ಕಳೆದ ತಿಂಗಳು ಚುನಾವಣಾ ಪ್ರಚಾರ ನಡೆಸುವಾಗ  ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಾರ್ಟಿಗಳ ವಿರುದ್ಧ ಓವೈಸಿ ವಾಗ್ದಾಳಿ ನಡೆಸಿದ್ದರು. ಎಸ್​ಪಿ ಮತ್ತು ಬಿಎಸ್​ಪಿ ಪಕ್ಷಗಳು ಅಲ್ಪಸಂಖ್ಯಾತರ ಬೆನ್ನಿಗೆ ಚೂರಿ ಹಾಕುವ ಪಕ್ಷಗಳು. ಕಳೆದ 30ವರ್ಷಗಳಿಂದಲೂ ಇದನ್ನೇ ಮಾಡಿಕೊಂಡು ಬಂದಿವೆ. ಅಲ್ಪ ಸಂಖ್ಯಾತರು, ಹಿಂದುಳಿದವರು ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಕ್ಕೆ ಮತ ಹಾಕಿದ್ದೇ ಬಂತು. ಆದರೆ ಹಿಂದಿನಿಂದ ಅವರು ಚೂರಿಯನ್ನೇ ಹಾಕಿದ್ದು ಬಿಟ್ಟರೆ ಇನ್ನೇನೂ ಮಾಡಲಿಲ್ಲ. ಅಲ್ಪಸಂಖ್ಯಾತರ ಮಕ್ಕಳಿಗೆ ಶಿಕ್ಷಣ ಸಿಗಲಿಲ್ಲ, ಉದ್ಯೋಗ ಕೊಡಲಿಲ್ಲ ಅಷ್ಟೇ ಅಲ್ಲ, ಬಡತನವೂ ಕೊನೆಯಾಗಲಿಲ್ಲ ಎಂದು ಆರೋಪಿಸಿದ್ದರು.

ಉತ್ತರ ಪ್ರದೇಶದಲ್ಲಿ ಎಐಎಂಐಎಂ ಪಕ್ಷ ಭಾಗಿದಾರಿ ಪರಿವರ್ತನ್​ ಮೋರ್ಚಾದೊಂದಿಗೆ ಮೈತ್ರಿ ಮಾಡಿಕೊಂಡು 100 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಆದರೆ ಒಂದೇ ಒಂದು ಕ್ಷೇತ್ರದಲ್ಲೂ ಗೆಲುವು ಕಂಡಿಲ್ಲ. ಓವೈಸಿ ಚುನಾವಣಾ ತಂತ್ರಗಾರಿಕೆಯಾಗಲಿ, ಅವರು ನಡೆಸಿದ್ದ ರ್ಯಾಲಿಗಳಾಗಲೀ ಪ್ರಯೋಜನಕ್ಕೆ ಬರಲಿಲ್ಲ. ಬಹುದೊಡ್ಡ ಅಂತರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನಾರಚನೆಗೆ ಸಿದ್ದು ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ

ಬಿಹಾರದಲ್ಲಿ NDA ಅಧಿಕಾರ ಹಂಚಿಕೆ ಸೂತ್ರ ಅಂತಿಮ: ಯಾರಿಗೆ ಎಷ್ಟು ಸಚಿವ ಖಾತೆ?

ಬಿಹಾರ: ನೂತನ ಸರ್ಕಾರ ರಚನೆಯ ಸರ್ಕಸ್; ಟಿಕೆಟ್ ಹಂಚಿಕೆ ಮಾದರಿಯಲ್ಲೇ ಖಾತೆ ಹಂಚಿಕೆಗೆ NDA ಸೂತ್ರ !

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಸಿಡಿದೆದ್ದ ಡಿಸಿಎಂ ಡಿ.ಕೆ ಶಿವಕುಮಾರ್!

SCROLL FOR NEXT