ರಾಹುಲ್ ಗಾಂಧಿ ಅವರೊಂದಿಗೆ ರೋಹಿತ್ ವೇಮುಲನ ತಾಯಿ ರಾಧಿಕಾ ವೇಮುಲ 
ದೇಶ

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆಗೂಡಿದ ರೋಹಿತ್ ವೇಮುಲನ ತಾಯಿ, ಯಾತ್ರೆಗೆ ಬೆಂಬಲ

ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಇಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸೇರಿಕೊಂಡರು.

ಹೈದರಾಬಾದ್: ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಇಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸೇರಿಕೊಂಡರು.

ರಾಧಿಕಾ ವೇಮುಲ ಅವರು ಬೆಳಗಿನ ಜಾವ ಆರಂಭವಾದ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಸ್ವಲ್ಪ ಕಾಲ ನಡೆದರು.

ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ ಅವರು, ರಾಹುಲ್ ಗಾಂಧಿ ಅವರೊಂದಿಗೆ ನಡೆದರು ಮತ್ತು ಬಿಜೆಪಿ-ಆರ್‌ಎಸ್‌ಎಸ್ ದಾಳಿಯಿಂದ ಸಂವಿಧಾನವನ್ನು ಉಳಿಸಲು ಕಾಂಗ್ರೆಸ್‌ಗೆ ಕರೆ ನೀಡಿದರು. ರೋಹಿತ್ ವೇಮುಲಾಗೆ ನ್ಯಾಯ ಸಿಗಲಿ. ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಿ, ದಲಿತರ ಪ್ರಾತಿನಿಧ್ಯವನ್ನು ಹೆಚ್ಚಿಸಿ, ಉನ್ನತ ನ್ಯಾಯಾಂಗದಲ್ಲಿ ದಲಿತರ ಪ್ರಾತಿನಿಧ್ಯ, ಎಲ್ಲರಿಗೂ ಶಿಕ್ಷಣ ಸಿಗಲಿ ಎಂದು ಸಭೆಯ ನಂತರ ರಾಧಿಕಾ ವೇಮುಲಾ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಿಂದ ಮತ್ತು ಹಲವಾರು ಪಕ್ಷದ ನಾಯಕರು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಧಿಕಾ ವೇಮುಲಾ ಗಾಂಧಿಯೊಂದಿಗೆ ನಡೆಯುತ್ತಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 26 ವರ್ಷದ ದಲಿತ ವಿದ್ಯಾರ್ಥಿ ವೇಮುಲ, ತಮಗಾದ ಕಿರುಕುಳದಿಂದಾಗಿ ಜ.17, 2016 ರಂದು ಆತ್ಮಹತ್ಯೆ ಮಾಡಿಕೊಂಡರು. ಅವರ ಸಾವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತೀಯತೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ