ರಾಹುಲ್ ಗಾಂಧಿ ಅವರೊಂದಿಗೆ ರೋಹಿತ್ ವೇಮುಲನ ತಾಯಿ ರಾಧಿಕಾ ವೇಮುಲ 
ದೇಶ

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆಗೂಡಿದ ರೋಹಿತ್ ವೇಮುಲನ ತಾಯಿ, ಯಾತ್ರೆಗೆ ಬೆಂಬಲ

ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಇಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸೇರಿಕೊಂಡರು.

ಹೈದರಾಬಾದ್: ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಇಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸೇರಿಕೊಂಡರು.

ರಾಧಿಕಾ ವೇಮುಲ ಅವರು ಬೆಳಗಿನ ಜಾವ ಆರಂಭವಾದ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಸ್ವಲ್ಪ ಕಾಲ ನಡೆದರು.

ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ ಅವರು, ರಾಹುಲ್ ಗಾಂಧಿ ಅವರೊಂದಿಗೆ ನಡೆದರು ಮತ್ತು ಬಿಜೆಪಿ-ಆರ್‌ಎಸ್‌ಎಸ್ ದಾಳಿಯಿಂದ ಸಂವಿಧಾನವನ್ನು ಉಳಿಸಲು ಕಾಂಗ್ರೆಸ್‌ಗೆ ಕರೆ ನೀಡಿದರು. ರೋಹಿತ್ ವೇಮುಲಾಗೆ ನ್ಯಾಯ ಸಿಗಲಿ. ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಿ, ದಲಿತರ ಪ್ರಾತಿನಿಧ್ಯವನ್ನು ಹೆಚ್ಚಿಸಿ, ಉನ್ನತ ನ್ಯಾಯಾಂಗದಲ್ಲಿ ದಲಿತರ ಪ್ರಾತಿನಿಧ್ಯ, ಎಲ್ಲರಿಗೂ ಶಿಕ್ಷಣ ಸಿಗಲಿ ಎಂದು ಸಭೆಯ ನಂತರ ರಾಧಿಕಾ ವೇಮುಲಾ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಿಂದ ಮತ್ತು ಹಲವಾರು ಪಕ್ಷದ ನಾಯಕರು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಧಿಕಾ ವೇಮುಲಾ ಗಾಂಧಿಯೊಂದಿಗೆ ನಡೆಯುತ್ತಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 26 ವರ್ಷದ ದಲಿತ ವಿದ್ಯಾರ್ಥಿ ವೇಮುಲ, ತಮಗಾದ ಕಿರುಕುಳದಿಂದಾಗಿ ಜ.17, 2016 ರಂದು ಆತ್ಮಹತ್ಯೆ ಮಾಡಿಕೊಂಡರು. ಅವರ ಸಾವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತೀಯತೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT