ಸಾಂದರ್ಭಿಕ ಚಿತ್ರ 
ದೇಶ

ಮೊರ್ಬಿ ಸೇತುವೆ ಕುಸಿತ: 47 ಮಕ್ಕಳು ಸೇರಿ ಸುಮಾರು 141 ಸಾವು, ಮೃತರ ಸಂಬಂಧಿಕರಿಗೆ 6 ಲಕ್ಷ ರೂ. ಪರಿಹಾರ 

ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಭವಿಸಿದ ಕೇಬಲ್ ಸೇತುವೆ ಕುಸಿತ ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ದುರುಕು ಝಾಲಾ ಸೇರಿದಂತೆ ಒಟ್ಟಾರೇ  47 ಮಕ್ಕಳು ಮೃತಪಟ್ಟಿದ್ದಾರೆ. ಈ ಪೈಕಿ 31 ಬಾಲಕರು , 16 ಬಾಲಕಿಯರಿದ್ದಾರೆ. ಇವರೆಲ್ಲರೂ 16 ವರ್ಷದೊಳಗಿನವರು ಎಂಬುದು ದೃಢಪಟ್ಟಿದೆ.

ಅಹಮದಾಬಾದ್: ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಭವಿಸಿದ ಕೇಬಲ್ ಸೇತುವೆ ಕುಸಿತ ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ದುರುಕು ಝಾಲಾ ಸೇರಿದಂತೆ ಒಟ್ಟಾರೇ  47 ಮಕ್ಕಳು ಮೃತಪಟ್ಟಿದ್ದಾರೆ. ಈ ಪೈಕಿ 31 ಬಾಲಕರು , 16 ಬಾಲಕಿಯರಿದ್ದಾರೆ. ಇವರೆಲ್ಲರೂ 16 ವರ್ಷದೊಳಗಿನವರು ಎಂಬುದು ದೃಢಪಟ್ಟಿದೆ.

ಒಟ್ಟಾರೇ ದುರಂತದಲ್ಲಿ ಸುಮಾರು 141 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.  ಇದಲ್ಲದೇ 58 ಪುರುಷರು ಮತ್ತು 27 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೃತರ ಸಂಬಂಧಿಕರಿಗೆ ರಾಜ್ಯಸರ್ಕಾರದಿಂದ 4 ಲಕ್ಷ ರೂ. ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ರೂ. 2 ಲಕ್ಷ, ಗಾಯಾಳುಗಳಿಗೆ  ತಲಾ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ. 17 ಜನರು ಇನ್ನೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ಗುಜರಾತ್ ವಿಪತ್ತು ನಿರ್ವಹಣಾ ಸಚಿವ ರಾಜೇಂದ್ರ ತ್ರಿವೇದಿ ತಿಳಿಸಿದ್ದಾರೆ.

ಶತಮಾನಗಳಷ್ಟು ಹಳೆಯದಾದ ಸೇತುವೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪದಡಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT