ಪಾದಯಾತ್ರೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 
ದೇಶ

ಭಾರತ್ ಜೋಡೋ ಯಾತ್ರೆಯಿಂದ ಮೌನ ಕ್ರಾಂತಿ, ರಾಜಕೀಯ ಚಿತ್ರಣವೇ ಬದಲಾವಣೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯು ರಾಜಕೀಯ ಚಿತ್ರಣವನ್ನು ಬದಲಾಯಿಸುವ ಮೌನ ಕ್ರಾಂತಿಯನ್ನು ತರುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.

ಹೈದರಾಬಾದ್: ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯು ರಾಜಕೀಯ ಚಿತ್ರಣವನ್ನು ಬದಲಾಯಿಸುವ ಮೌನ ಕ್ರಾಂತಿಯನ್ನು ತರುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.

ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಬೋವೆನಪಲ್ಲಿಯಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಖರ್ಗೆ, ಯಾತ್ರಿಗಳೊಂದಿಗೆ ಸಂವಾದ ನಡೆಸಿದರು. ಅಂತೆಯೇ ಅವರು ಕೂಡ ರಾಹುಲ್ ಗಾಂಧಿ ಅವರೊಂದಿಗೆ 3500 ಕಿಲೋಮೀಟರ್ ದೂರದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. 'ನಮ್ಮ ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಉತ್ತಮ ಸ್ಫೂರ್ತಿಯ ಮೂಲವಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯು ಮೂಕ ಕ್ರಾಂತಿಯನ್ನು ತರುತ್ತಿದ್ದು, ರಾಜಕೀಯ ಚಿತ್ರಣವನ್ನೇ ಬದಲಾಯಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ನಂತರ, ಯಾತ್ರೆಯು MGB ಬಜಾಜ್ ಶೋರೂಮ್, ಬಾಲಾನಗರ ಮುಖ್ಯ ರಸ್ತೆ, ಹೈದರಾಬಾದ್ ನಗರದಿಂದ ಪುನರಾರಂಭವಾಯಿತು, ರಾಹುಲ್ ಗಾಂಧಿ ಜೊತೆಗೆ ಇತರ ಭಾರತ್ ಯಾತ್ರಿಗಳು ಯಾತ್ರೆಯ 56 ನೇ ದಿನದಂದು ತಮ್ಮ ನಡಿಗೆಯನ್ನು ಮುಂದುವರೆಸಿದರು. ಯಾತ್ರೆಯ ಬೆಳಗಿನ ವಿರಾಮವು ಹೋಟೆಲ್ ಕಿನಾರಾ ಗ್ರ್ಯಾಂಡ್, ಹಫೀಜ್‌ಪೇಟ್‌ನಲ್ಲಿ ಇರಲಿದೆ, ಬಳಿಕ ಪಾದಯಾತ್ರೆಯು BHEL ಬಸ್ ನಿಲ್ದಾಣದಿಂದ ಪುನರಾರಂಭವಾಗುತ್ತದೆ. ಸಂಜೆಯ ವಿರಾಮ ಹರಿ ದೋಷ, ಮುತ್ತಂಗಿ ಬಳಿ ಮತ್ತು ರಾತ್ರಿ ನಿಲುಗಡೆ ಕೌಲಂಪೇಟೆ ಬಳಿ, ಗಣೇಶ ಮಂದಿರ ರುದ್ರಾರಾಮ್ ಎದುರು ಇರುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆ ತೆಲಂಗಾಣ ಪ್ರವೇಶ ಮಾಡಿದ್ದು, ಇದಕ್ಕೂ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಮ್ಯಾರಥಾನ್ ನಡಿಗೆಯನ್ನು ಪೂರ್ಣಗೊಳಿಸಿದ್ದಾರೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಯಾತ್ರೆಯನ್ನು ಸಂಘಟಿಸಲು 10 ವಿಶೇಷ ಸಮಿತಿಗಳನ್ನು ರಚಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT