ಅರವಿಂದ ಕೇಜ್ರಿವಾಲ್ 
ದೇಶ

ನಿರ್ಮಾಣ ಕಾಮಗಾರಿಗಳಿಗೆ ನಿಷೇಧ: ಕಟ್ಟಡ ಕಾರ್ಮಿಕರಿಗೆ 5,000 ರೂಪಾಯಿ ನೆರವು ಘೋಷಿಸಿದ ದೆಹಲಿ ಸಿಎಂ

ಮಾಲಿನ್ಯ ಸಂಬಂಧಿತ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ಆರ್ಥಿಕ ನೆರವು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾರ್ಮಿಕ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ಬುಧವಾರ ಸೂಚಿಸಿದ್ದಾರೆ.

ನವದೆಹಲಿ: ಮಾಲಿನ್ಯ ಸಂಬಂಧಿತ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ಆರ್ಥಿಕ ನೆರವು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾರ್ಮಿಕ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ಬುಧವಾರ ಸೂಚಿಸಿದ್ದಾರೆ.

ಮಾಲಿನ್ಯದ ಮಟ್ಟವು ಹದಗೆಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರದ ವಾಯು ಗುಣಮಟ್ಟದ ಸಮಿತಿಯು, ದೆಹಲಿ-ಎನ್‌ಸಿಆರ್‌ನಲ್ಲಿ ಅಗತ್ಯ ಯೋಜನೆಗಳು ಮತ್ತು GRAP III ಅಡಿಯ ಕೆಲವನ್ನು ಹೊರತುಪಡಿಸಿ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲೆ ನಿಷೇಧ ಹೇರುವಂತೆ ಶನಿವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ನಿರ್ಮಾಣ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ.

'ಈ ಅವಧಿಯಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ಇಲ್ಲದಿರುವಾಗ ಪ್ರತಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ 5000 ರೂಪಾಯಿ ಆರ್ಥಿಕ ನೆರವು ನೀಡುವಂತೆ ಕಾರ್ಮಿಕ ಸಚಿವ ಮನೀಷ್ ಸಿಸೋಡಿಯಾ ಅವರಿಗೆ ಸೂಚಿಸಿದ್ದೇನೆ' ಎಂದು ಕೇಜ್ರಿವಾಲ್ ಬುಧವಾರ ಟ್ವೀಟ್ ಮಾಡಿದ್ದಾರೆ.

ಎಎಪಿ ಸರ್ಕಾರವು ಈ ಹಿಂದೆ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ದೆಹಲಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆರ್ಥಿಕ ಸಹಾಯವನ್ನು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT