ವಿಕಾಸ್ ದುಬೆ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿಕಾಸ್ ದುಬೆ, ಆತನ ಸಹಚರರ ಆಸ್ತಿ ಜಪ್ತಿ ಮಾಡಿದ ಇಡಿ

ಹತ್ಯೆಗೀಡಾದ ಉತ್ತರ ಪ್ರದೇಶದ ದರೋಡೆಕೋರ ವಿಕಾಸ್ ದುಬೆ, ಆತನ ಕುಟುಂಬ ಮತ್ತು ಸಹಚರರಿಗೆ ಸೇರಿದ 10 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ....

ನವದೆಹಲಿ: ಹತ್ಯೆಗೀಡಾದ ಉತ್ತರ ಪ್ರದೇಶದ ದರೋಡೆಕೋರ ವಿಕಾಸ್ ದುಬೆ, ಆತನ ಕುಟುಂಬ ಮತ್ತು ಸಹಚರರಿಗೆ ಸೇರಿದ 10 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ತಿಳಿಸಿದೆ.

ಪಿಎಂಎಲ್‌ಎ ಕಾಯ್ದೆ ಅಡಿ ಕಾನ್ಪುರ ಮತ್ತು ಲಖನೌದಲ್ಲಿರುವ ಒಟ್ಟು 28 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು 10.12 ಕೋಟಿ ಮೌಲ್ಯದ ಈ ಆಸ್ತಿಗಳು ವಿಕಾಸ್ ದುಬೆ, ಅವರ ಕುಟುಂಬ ಸದಸ್ಯರು, ಸಹಾಯಕ ಜೈಕಾಂತ್ ಬಾಜಪೇಯ್ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಅವರ(ದುಬೆ ಅವರ) ಸಹಚರರ ಹೆಸರಿನಲ್ಲಿದೆ. ಈ ಆಸ್ತಿಗಳನ್ನು ವಿಕಾಸ್ ದುಬೆ ಅಪರಾಧ ಚಟುವಟಿಕೆಗಳಿಂದ ಗಳಿಸಿದ್ದಾರೆ" ಎಂದು ಇಡಿ ಹೇಳಿದೆ.

ಉತ್ತರ ಪ್ರದೇಶ ಪೊಲೀಸರು ಜುಲೈ 10, 2020 ರಂದು ಬೆಳಗ್ಗೆ ಉಜ್ಜಯಿನಿಯಿಂದ ಕಾನ್ಪುರಕ್ಕೆ ದುಬೆಯನ್ನು ಕರೆದೊಯ್ಯುತ್ತಿದ್ದಾಗ ಪೊಲೀಸ್ ವಾಹನ ಅಪಘಾತಕ್ಕೀಡಾಗಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ದುಬೆಯನ್ನು ಎನ್‌ಕೌಂಟರ್‌ ಮಾಡಲಾಗಿತ್ತು.

ದುಬೆಯ ಎನ್‌ಕೌಂಟರ್‌ಗೂ ಮೊದಲು, ಪ್ರತ್ಯೇಕ ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಆತನ ಐವರು ಸಹಚರರನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT