ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ 
ದೇಶ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ; ವಾಯುಮಾಲಿನ್ಯ ಕಡಿತಗೊಳಿಸಲು ಮನೆಯಿಂದಲೇ ಕೆಲಸ ಮಾಡಿ ಎಂದ ಸಚಿವ ಗೋಪಾಲ್ ರೈ

ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.

ನವದೆಹಲಿ: ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಹುಲ್ಲು ಸುಡುವಿಕೆಗೆ ಪಂಜಾಬ್‌ನಲ್ಲಿನ ರೈತರನ್ನು ಬಿಜೆಪಿ ಗುರಿಯಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಳೆಯ ಉಳಿಕೆಯನ್ನು ಸುಡದಿರಲು ರೈತರಿಗೆ ನಗದು ಪ್ರೋತ್ಸಾಹ ನೀಡುವ ರಾಜ್ಯ ಸರ್ಕಾರದ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬೆಂಬಲಿಸದ ಕಾರಣದಿಂದಲೇ ಪಂಜಾಬ್‌ನಲ್ಲಿ ರೈತರು ಹುಲ್ಲು ಸುಡಲು ಪ್ರಮುಖ ಕಾರಣವಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹೇಳಿದ್ದಾರೆ.

'ರೈತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಕೃಷಿ ತ್ಯಾಜ್ಯವನ್ನು ಸುಟ್ಟು ಹಾಕುತ್ತಿದ್ದಾರೆ ಎಂದು ಬಿಜೆಪಿಯವರು ದೂರುತ್ತಿದ್ದಾರೆ. ಈಗ ಅವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಅವರು ರೈತರನ್ನು ನಿಂದಿಸುವುದನ್ನು ಮತ್ತು ಸೇಡು ತೀರಿಸಿಕೊಳ್ಳುವುದನ್ನು ನಿಲ್ಲಿಸಬೇಕು' ಎಂದು ರೈ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

'ವಾಯು ಮಾಲಿನ್ಯ ಸಮಸ್ಯೆಯನ್ನು ರಾಜಕೀಯದ ಮೂಲಕ ಬಗೆಹರಿಸಲು ಸಾಧ್ಯವಿಲ್ಲ. ವಾಯು ಗುಣಮಟ್ಟ ನಿರ್ವಹಣೆ ಆಯೋಗವು (CAQM) ಒಂದು ಯೋಜನೆಯನ್ನು ರೂಪಿಸಿದೆ. ಇದನ್ನು ಉತ್ತರ ಪ್ರದೇಶ ಮತ್ತು ಹರಿಯಾಣದ ಗಾಜಿಯಾಬಾದ್, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಮತ್ತು ಬಹದ್ದೂರ್‌ಗಢದಲ್ಲಿ ಜಾರಿಗೆ ತರಬೇಕಾಗುತ್ತದೆ' ಎಂದರು.

'ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (ಸಿಎಸ್‌ಇ) ನಡೆಸಿದ ಅಧ್ಯಯನದ ಪ್ರಕಾರ, ದೆಹಲಿಯಲ್ಲಿ ಶೇ 69ರಷ್ಟು ವಾಯು ಮಾಲಿನ್ಯವು ಹೊರಗಿನಿಂದ ಬರುತ್ತದೆ' ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT