ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ 
ದೇಶ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ; ವಾಯುಮಾಲಿನ್ಯ ಕಡಿತಗೊಳಿಸಲು ಮನೆಯಿಂದಲೇ ಕೆಲಸ ಮಾಡಿ ಎಂದ ಸಚಿವ ಗೋಪಾಲ್ ರೈ

ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.

ನವದೆಹಲಿ: ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಹುಲ್ಲು ಸುಡುವಿಕೆಗೆ ಪಂಜಾಬ್‌ನಲ್ಲಿನ ರೈತರನ್ನು ಬಿಜೆಪಿ ಗುರಿಯಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಳೆಯ ಉಳಿಕೆಯನ್ನು ಸುಡದಿರಲು ರೈತರಿಗೆ ನಗದು ಪ್ರೋತ್ಸಾಹ ನೀಡುವ ರಾಜ್ಯ ಸರ್ಕಾರದ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬೆಂಬಲಿಸದ ಕಾರಣದಿಂದಲೇ ಪಂಜಾಬ್‌ನಲ್ಲಿ ರೈತರು ಹುಲ್ಲು ಸುಡಲು ಪ್ರಮುಖ ಕಾರಣವಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹೇಳಿದ್ದಾರೆ.

'ರೈತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಕೃಷಿ ತ್ಯಾಜ್ಯವನ್ನು ಸುಟ್ಟು ಹಾಕುತ್ತಿದ್ದಾರೆ ಎಂದು ಬಿಜೆಪಿಯವರು ದೂರುತ್ತಿದ್ದಾರೆ. ಈಗ ಅವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಅವರು ರೈತರನ್ನು ನಿಂದಿಸುವುದನ್ನು ಮತ್ತು ಸೇಡು ತೀರಿಸಿಕೊಳ್ಳುವುದನ್ನು ನಿಲ್ಲಿಸಬೇಕು' ಎಂದು ರೈ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

'ವಾಯು ಮಾಲಿನ್ಯ ಸಮಸ್ಯೆಯನ್ನು ರಾಜಕೀಯದ ಮೂಲಕ ಬಗೆಹರಿಸಲು ಸಾಧ್ಯವಿಲ್ಲ. ವಾಯು ಗುಣಮಟ್ಟ ನಿರ್ವಹಣೆ ಆಯೋಗವು (CAQM) ಒಂದು ಯೋಜನೆಯನ್ನು ರೂಪಿಸಿದೆ. ಇದನ್ನು ಉತ್ತರ ಪ್ರದೇಶ ಮತ್ತು ಹರಿಯಾಣದ ಗಾಜಿಯಾಬಾದ್, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಮತ್ತು ಬಹದ್ದೂರ್‌ಗಢದಲ್ಲಿ ಜಾರಿಗೆ ತರಬೇಕಾಗುತ್ತದೆ' ಎಂದರು.

'ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (ಸಿಎಸ್‌ಇ) ನಡೆಸಿದ ಅಧ್ಯಯನದ ಪ್ರಕಾರ, ದೆಹಲಿಯಲ್ಲಿ ಶೇ 69ರಷ್ಟು ವಾಯು ಮಾಲಿನ್ಯವು ಹೊರಗಿನಿಂದ ಬರುತ್ತದೆ' ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT