ಮೊರ್ಬಿ ಸೇತುವೆ ಕುಸಿತ 
ದೇಶ

ಮೊರ್ಬಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದ ಒರೆವಾ ಅಧಿಕಾರಿ: 4 ಆರೋಪಿಗಳು ಪೊಲೀಸ್ ವಶಕ್ಕೆ

141 ಮಂದಿಯನ್ನು ಬಲಿ ಪಡೆದ ಗುಜರಾತ್ ನ ಮೊಬ್ರಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರಾದ, ಸೇತುವೆ ನವೀಕರಿಸಿದ ಒರೆವಾ ಕಂಪನಿಯ ಅಧಿಕಾರಿ ಹೇಳಿದ್ದಾರೆ.

ಮೊರ್ಬಿ: 141 ಮಂದಿಯನ್ನು ಬಲಿ ಪಡೆದ ಗುಜರಾತ್ ನ ಮೊಬ್ರಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರಾದ, ಸೇತುವೆ ನವೀಕರಿಸಿದ ಒರೆವಾ ಕಂಪನಿಯ ಅಧಿಕಾರಿ ಹೇಳಿದ್ದಾರೆ.

ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಕಂಪನಿಯ ಒಂಬತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಇಂದು ನ್ಯಾಯಾಲಕ್ಕೆ ಹಾಜರುಪಡಿಸಿದರು. ವಿಚಾರಣೆ ವೇಳೆ ಆರೋಪಿಯೊಬ್ಬರು ಈ ಘಟನೆ ನಡೆದಿರುವುದು "ದೇವರ ಇಚ್ಛೆ" ಎಂದು ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

150 ವರ್ಷಗಳಷ್ಟು ಹಳೆಯದಾದ ಸೇತುವೆಯ ನಿರ್ವಹಣೆಯ ಹೊಣೆ ಹೊತ್ತಿರುವ ಒರೆವಾ ಕಂಪನಿಯ ಮ್ಯಾನೇಜರ್ ದೀಪಕ್ ಪರೇಖ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೇತುವೆ ಕುಸಿತದ ನಂತರ ಬಂಧಿಸಲಾದ ಒಂಬತ್ತು ಜನರಲ್ಲಿ ಅವರು ಒಬ್ಬರು.

"ಭಗವಾನ್ ಕಿ ಇಚ್ಚಾ (ದೇವರ ಇಚ್ಛೆ), ಇಂತಹ ದುರದೃಷ್ಟಕರ ಘಟನೆ ಸಂಭವಿಸಿದೆ" ಎಂದು ಅವರು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಂಜೆ ಖಾನ್ ಅವರಿಗೆ ತಿಳಿಸಿದರು.

ಅಕ್ಟೋಬರ್ 26 ರಂದು ಸರ್ಕಾರದ ಅನುಮೋದನೆ ಅಥವಾ ಗುಣಮಟ್ಟ ಪರೀಕ್ಷೆ ಇಲ್ಲದೆ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು.

ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಹೆಚ್ಚಿನ ವಿಚಾರಣೆಗಾಗಿ ನಾಲ್ವರನ್ನು ಪೊಲೀಸ್ ವಶಕ್ಕೆ ನೀಡಿದೆ ಮತ್ತು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT