ಮೊರ್ಬಿ ಸೇತುವೆ ಕುಸಿತ 
ದೇಶ

ಮೊರ್ಬಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದ ಒರೆವಾ ಅಧಿಕಾರಿ: 4 ಆರೋಪಿಗಳು ಪೊಲೀಸ್ ವಶಕ್ಕೆ

141 ಮಂದಿಯನ್ನು ಬಲಿ ಪಡೆದ ಗುಜರಾತ್ ನ ಮೊಬ್ರಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರಾದ, ಸೇತುವೆ ನವೀಕರಿಸಿದ ಒರೆವಾ ಕಂಪನಿಯ ಅಧಿಕಾರಿ ಹೇಳಿದ್ದಾರೆ.

ಮೊರ್ಬಿ: 141 ಮಂದಿಯನ್ನು ಬಲಿ ಪಡೆದ ಗುಜರಾತ್ ನ ಮೊಬ್ರಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರಾದ, ಸೇತುವೆ ನವೀಕರಿಸಿದ ಒರೆವಾ ಕಂಪನಿಯ ಅಧಿಕಾರಿ ಹೇಳಿದ್ದಾರೆ.

ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಕಂಪನಿಯ ಒಂಬತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಇಂದು ನ್ಯಾಯಾಲಕ್ಕೆ ಹಾಜರುಪಡಿಸಿದರು. ವಿಚಾರಣೆ ವೇಳೆ ಆರೋಪಿಯೊಬ್ಬರು ಈ ಘಟನೆ ನಡೆದಿರುವುದು "ದೇವರ ಇಚ್ಛೆ" ಎಂದು ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

150 ವರ್ಷಗಳಷ್ಟು ಹಳೆಯದಾದ ಸೇತುವೆಯ ನಿರ್ವಹಣೆಯ ಹೊಣೆ ಹೊತ್ತಿರುವ ಒರೆವಾ ಕಂಪನಿಯ ಮ್ಯಾನೇಜರ್ ದೀಪಕ್ ಪರೇಖ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೇತುವೆ ಕುಸಿತದ ನಂತರ ಬಂಧಿಸಲಾದ ಒಂಬತ್ತು ಜನರಲ್ಲಿ ಅವರು ಒಬ್ಬರು.

"ಭಗವಾನ್ ಕಿ ಇಚ್ಚಾ (ದೇವರ ಇಚ್ಛೆ), ಇಂತಹ ದುರದೃಷ್ಟಕರ ಘಟನೆ ಸಂಭವಿಸಿದೆ" ಎಂದು ಅವರು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಂಜೆ ಖಾನ್ ಅವರಿಗೆ ತಿಳಿಸಿದರು.

ಅಕ್ಟೋಬರ್ 26 ರಂದು ಸರ್ಕಾರದ ಅನುಮೋದನೆ ಅಥವಾ ಗುಣಮಟ್ಟ ಪರೀಕ್ಷೆ ಇಲ್ಲದೆ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು.

ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಹೆಚ್ಚಿನ ವಿಚಾರಣೆಗಾಗಿ ನಾಲ್ವರನ್ನು ಪೊಲೀಸ್ ವಶಕ್ಕೆ ನೀಡಿದೆ ಮತ್ತು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT