ಸಂಗ್ರಹ ಚಿತ್ರ 
ದೇಶ

'ಬಿಂದಿ' ಇಟ್ಟಿಲ್ಲ ಎಂದು ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಬಲಪಂಥೀಯ ಕಾರ್ಯಕರ್ತೆ ಭಿಡೆ

ಹಣೆಗೆ 'ಬಿಂದಿ' ಇಟ್ಟಿಲ್ಲ ಎಂಬ ಕಾರಣಕ್ಕೆ ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ಬಲಪಂಥೀಯ ನಾಯಕ ಸಂಭಾಜಿ ಭಿಡೆ ನಿರಾಕರಿಸಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ಮುಂಬೈ: ಹಣೆಗೆ 'ಬಿಂದಿ' ಇಟ್ಟಿಲ್ಲ ಎಂಬ ಕಾರಣಕ್ಕೆ ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ಬಲಪಂಥೀಯ ನಾಯಕ ಸಂಭಾಜಿ ಭಿಡೆ ನಿರಾಕರಿಸಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾದ ನಂತರ ಈ ಘಟನೆ ನಡೆದಿದ್ದು ಈ ಹಿನ್ನೆಲೆಯಲ್ಲಿ ಭಿಡೆ ಅವರಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಸಿಎಂ ಶಿಂಧೆ ಭೇಟಿಯ ವಿಚಾರವಾಗಿ ಹೇಳಿಕೆ ನೀಡುವಂತೆ ಮಾಧ್ಯಮ ಮಹಿಳಾ ವರದಿಗಾರ್ತಿ ಕೇಳಿದ್ದು ಇದಕ್ಕೆ ಭಿಡೆ ಅವರು, ಹೇಳಿಕೆ ಪಡೆಯುವ ಮುನ್ನ 'ಬಿಂದಿ'ಯನ್ನು ಯಾಕೆ ಇಟ್ಟುಕೊಂಡಿಲ್ಲ ಎಂದು ಕೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. 

ಮಹಿಳೆ ಭಾರತ ಮಾತೆಯನ್ನು ಹೋಲುತ್ತಾರೆ. ಬಿಂದಿ ಇಡದೇ 'ವಿಧವೆ' ಯಂತೆ ಕಾಣಿಸಿಕೊಳ್ಳಬಾರದು ಎಂದು ಅವರು ಪತ್ರಕರ್ತರಿಗೆ ಹೇಳಿದರು.

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ಬಲಪಂಥೀಯ ನಾಯಕನ ಹೇಳಿಕೆಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

2018ರಲ್ಲಿ ಭಿಡೆ ಅವರು ತಮ್ಮ ತೋಟದ ಮಾವಿನ ಹಣ್ಣುಗಳನ್ನು ತಿಂದರೆ ದಂಪತಿಗಳಿಗೆ ಸಂತಾನವಾಗಲಿದೆ ಎಂದು ಹೇಳಿದ್ದು ಈ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT