ವರುಣ್ ಗಾಂಧಿ 
ದೇಶ

ರಾಷ್ಟ್ರ ರಾಜಧಾನಿಯಲ್ಲಿ ದಟ್ಟ ವಾಯುಮಾಲಿನ್ಯ, ಸರ್ಕಾರಕ್ಕೆ ಗಂಭೀರತೆ ಇಲ್ಲ: ವರುಣ್ ಗಾಂಧಿ

ದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. 

ನವದೆಹಲಿ: ದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಸಮಸ್ಯೆಯನ್ನು ಸರ್ಕಾರವಾಗಲಿ ಅಥವಾ ಜನರಾಗಲಿ ಗಂಭೀರವಾಗಿ ತೆಗೆದುಕೊಂಡಿಲ್ಲ.  ಉಸಿರಾಟ, ಹೃದಯ ಮತ್ತು ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಂದ ಆಸ್ಪತ್ರೆಗಳು ತುಂಬಿ ತುಳುಕಾಡುತ್ತಿವೆ ಎಂದು ಹೇಳಿದ್ದಾರೆ. 
 
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿನ 10 ಮಕ್ಕಳ ಪೈಕಿ 8 ಮಕ್ಕಳಿಗೆ ಉಸಿರಾಟದ ಸಮಸ್ಯೆಯಿದೆ. ಚರ್ಚೆ ನಡೆದ ಒಂದು ವರ್ಷದ ನಂತರವೂ ಅನೇಕ ಸರ್ಕಾರಿ ಘಟಕಗಳ ನಡುವಣ ಸಮನ್ವಯತೆಯ ಕೊರತೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಈ ಸಮಸ್ಯೆಯನ್ನು ಹೋಗಲಾಡಿಸದಿದ್ದಲ್ಲಿ ಗಾಳಿಯ ಗುಣಮಟ್ಟ ಕ್ಷಿಣಿಸುವುದರೊಂದಿಗೆ  46 ಮಿಲಿಯನ್ ಜನರ ಉಸಿರಾಟಕ್ಕೆ ತುಂಬಾ ಸಮಸ್ಯೆಯಾಗಲಿದೆ ಎಂದು ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT