ವರುಣ್ ಗಾಂಧಿ 
ದೇಶ

ರಾಷ್ಟ್ರ ರಾಜಧಾನಿಯಲ್ಲಿ ದಟ್ಟ ವಾಯುಮಾಲಿನ್ಯ, ಸರ್ಕಾರಕ್ಕೆ ಗಂಭೀರತೆ ಇಲ್ಲ: ವರುಣ್ ಗಾಂಧಿ

ದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. 

ನವದೆಹಲಿ: ದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಸಮಸ್ಯೆಯನ್ನು ಸರ್ಕಾರವಾಗಲಿ ಅಥವಾ ಜನರಾಗಲಿ ಗಂಭೀರವಾಗಿ ತೆಗೆದುಕೊಂಡಿಲ್ಲ.  ಉಸಿರಾಟ, ಹೃದಯ ಮತ್ತು ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಂದ ಆಸ್ಪತ್ರೆಗಳು ತುಂಬಿ ತುಳುಕಾಡುತ್ತಿವೆ ಎಂದು ಹೇಳಿದ್ದಾರೆ. 
 
ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿನ 10 ಮಕ್ಕಳ ಪೈಕಿ 8 ಮಕ್ಕಳಿಗೆ ಉಸಿರಾಟದ ಸಮಸ್ಯೆಯಿದೆ. ಚರ್ಚೆ ನಡೆದ ಒಂದು ವರ್ಷದ ನಂತರವೂ ಅನೇಕ ಸರ್ಕಾರಿ ಘಟಕಗಳ ನಡುವಣ ಸಮನ್ವಯತೆಯ ಕೊರತೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಈ ಸಮಸ್ಯೆಯನ್ನು ಹೋಗಲಾಡಿಸದಿದ್ದಲ್ಲಿ ಗಾಳಿಯ ಗುಣಮಟ್ಟ ಕ್ಷಿಣಿಸುವುದರೊಂದಿಗೆ  46 ಮಿಲಿಯನ್ ಜನರ ಉಸಿರಾಟಕ್ಕೆ ತುಂಬಾ ಸಮಸ್ಯೆಯಾಗಲಿದೆ ಎಂದು ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT