ಈಸುದನ್ ಗಧ್ವಿ 
ದೇಶ

ಗುಜರಾತ್ ವಿಧಾನಸಭೆ ಚುನಾವಣೆ: ಮಾಜಿ ಪತ್ರಕರ್ತ ಈಸುದನ್ ಗಧ್ವಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಗೆ ಸಡ್ಡು ಹೊಡೆದಿರುವ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದು,...

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಗೆ ಸಡ್ಡು ಹೊಡೆದಿರುವ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದು, ಆಪ್ ಅಧಿಕಾರಕ್ಕೆ ಬಂದರೆ ಮಾಜಿ ಪತ್ರಕರ್ತ ಈಸುದನ್ ಗಧ್ವಿ ಅವರು ಗುಜರಾತ್ ಸಿಎಂ ಆಗಲಿದ್ದಾರೆ ಎಂದು ಹೇಳಿದೆ.

ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್ ಚುನಾವಣೆಯಲ್ಲಿ ಈಸುದನ್ ಗಧ್ವಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

ಈ ಸಂಬಂಧ ಪಕ್ಷ ನಡೆಸಿದ ಸಮೀಕ್ಷೆಯಲ್ಲಿ 40 ವರ್ಷದ ಗಧ್ವಿ ಅವರು ಶೇಕಡಾ 73 ರಷ್ಟು ಮತಗಳನ್ನು ಪಡೆದಿದ್ದಾರೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.

ಗುಜರಾತ್ ಜನರು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಫೋನ್ ಸಂಖ್ಯೆಗೆ ಕರೆ ಮಾಡಿ ಮತ್ತು ರೆಕಾರ್ಡ್ ಮಾಡಿದ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಪಾಟಿದಾರ್ ಸಮುದಾಯದ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಗೋಪಾಲ್ ಇಟಾಲಿಯಾ ವಿರುದ್ಧ ಗಧ್ವಿ ಕಣಕ್ಕಿಳಿದಿದ್ದರು.

ಗಧ್ವಿ ಅವರು ಎಎಪಿಯ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಮತ್ತು ಅದರ ರಾಷ್ಟ್ರೀಯ ಕಾರ್ಯಕಾರಿ ತಂಡದ ಸದಸ್ಯರಾಗಿದ್ದಾರೆ.

ಪ್ರಸಿದ್ಧ ಟಿವಿ ಪತ್ರಕರ್ತ ಗಧ್ವಿ ಅವರು ವಿಟಿವಿ ನ್ಯೂಸ್‌ನ ಮಾಜಿ ಸಂಪಾದಕರಾಗಿದ್ದು, ಚಾನೆಲ್‌ನ ಜನಪ್ರಿಯ ಸುದ್ದಿ ಕಾರ್ಯಕ್ರಮ ಮಹಾಮಂತನ್‌ ನಿರೂಪಕರಾಗಿದ್ದರು.

ಗಧ್ವಿ ಅವರು ದ್ವಾರಕಾ ಜಿಲ್ಲೆಯ ಪಿಪಾಲಿಯಾ ಗ್ರಾಮದ ರೈತ ಕುಟುಂಬದಿಂದ ಬಂದವರಾಗಿದ್ದು, ರಾಜ್ಯದ ಜನಸಂಖ್ಯೆಯ ಶೇಕಡಾ 48 ರಷ್ಟಿರುವ ಇತರ ಹಿಂದುಳಿದ ವರ್ಗಕ್ಕೆ ಸೇರಿದ್ದಾರೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಘೋಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT