ಆರ್ ಎಸ್ ಎಸ್ ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ

ಕೆಲವು ಸ್ಥಳಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬಂದಿಲ್ಲ. ನವೆಂಬರ್ 6 ರಂದು ತಮಿಳುನಾಡಿನಾದ್ಯಂತ 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಬಹುದು...

ಚೆನ್ನೈ: ಕೆಲವು ಸ್ಥಳಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬಂದಿಲ್ಲ. ನವೆಂಬರ್ 6 ರಂದು ತಮಿಳುನಾಡಿನಾದ್ಯಂತ 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಬಹುದು ಎಂದ ಮದ್ರಾಸ್ ಹೈಕೋರ್ಟ್ ಶುಕ್ರವಾರ ಹೇಳಿದೆ.

ಆದಾಗ್ಯೂ, ಕೊಯಮತ್ತೂರು ನಗರ, ಪೊಲ್ಲಾಚಿ, ಮೆಟ್ಟುಪಾಳ್ಯಂ, ಪಲ್ಲಡಂ, ಅರುಮನೈ ಮತ್ತು ನಾಗರ್‌ಕೋಯಿಲ್ ಸೇರಿದಂತೆ ಆರು ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಲು ನ್ಯಾಯಮೂರ್ತಿ ಜಿಕೆ ಇಳಂತಿರಾಯನ್ ಅವರು ಅನುಮತಿ ನಿರಾಕರಿಸಿದ್ದಾರೆ.

ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕ ಸಭೆಗಳನ್ನು ಆವರಣದೊಳಗೆ ನಡೆಸಬೇಕು ಮತ್ತು ಹೊರಾಂಗಣದಲ್ಲಿ ಮೆರವಣಿಗೆಗಳನ್ನು ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ತಮಿಳುನಾಡು ಪೊಲೀಸರು ಸಲ್ಲಿಸಿದ ಗುಪ್ತಚರ ವರದಿಯನ್ನು ಪರಿಶೀಲಿಸಿದಾಗ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ನಿದರ್ಶನಗಳು ಕೆಲವು ಸ್ಥಳಗಳಲ್ಲಿ ಮಾತ್ರ ಕಂಡುಬಂದಿದೆ. ಅವುಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬಂದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಪಿಎಫ್‌ಐ ಮೇಲಿನ ನಿಷೇಧದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಉಲ್ಲೇಖಿಸಿ ಆರಂಭದಲ್ಲಿ ಅಕ್ಟೋಬರ್ 2 ರಂದು ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ತಮಿಳುನಾಡು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ ನಂತರ ಆರ್‌ಎಸ್‌ಎಸ್ ಸದಸ್ಯರು ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಗಳ ಮೇಲೆ ಮದ್ರಾಸ್ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!

SCROLL FOR NEXT