ದೇಶ

ಶೀಘ್ರದಲ್ಲೇ ಜಗನ್ ಮೋಹನ್ ರೆಡ್ಡಿ ಸರ್ಕಾರ ಪತನ: ಪವನ್ ಕಲ್ಯಾಣ್ ಭವಿಷ್ಯ

Shilpa D

ಅಮರಾವತಿ : ವೈಎಸ್ ಆರ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.

ಗುಂಟೂರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ‘ಜಗನ್‌ ಸರ್ಕಾರ ಪತನವಾಗಲಿದೆ‘ಎಂದು ಹೇಳಿದರು. ಜನಸೇನಾ ಪಕ್ಷದ ಬೆಂಬಲಿಗರ ಮನೆಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿದ ಪವನ್ ಕಲ್ಯಾಣ್, ಈ ಧ್ವಂಸದಿಂದಲೇ ಸರ್ಕಾರದ ಪತನವು ಆರಂಭವಾಗಿದೆ. ಈ ಸರ್ಕಾರ ಬಹಳ ದಿನಗಳವರೆಗೆ ಇರುವುದಿಲ್ಲ ಎಂದು ಗುಡುಗಿದ್ದಾರೆ.

ಗ್ರಾಮದಲ್ಲಿ ಒತ್ತುವರಿ ನೆಪದಲ್ಲಿ ಯಾವುದೇ ನೋಟಿಸ್‌ ನೀಡದೆ ಮನೆಗಳನ್ನು ಧ್ವಂಸ ಮಾಡಲಾಗಿದೆ. ಬಹುಪಾಲು ಮನೆಗಳು ಜನಾಸೇನಾ ಪಕ್ಷದ ಬೆಂಬಲಿಗರ ಮನೆಗಳು ಎಂದು ವರದಿಯಾಗಿದೆ.

SCROLL FOR NEXT