ಸಂಗ್ರಹ ಚಿತ್ರ 
ದೇಶ

ಮದ್ಯಪಾನ ವೇಳೆ ದುರಂತ; ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿ ಸಾವು!

ಕುಡಿದ ಮತ್ತಿನಲ್ಲಿ ತಾನು ತಿಂದ ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹೈದರಾಬಾದ್: ಕುಡಿದ ಮತ್ತಿನಲ್ಲಿ ತಾನು ತಿಂದ ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಜನಗಾಂವ್ ಜಿಲ್ಲೆಯ ಬಚನ್ನಪೇಟೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕುಡಿಯಲು ಬಾರ್​​ಗೆ ಹೋದ ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಬಳಿಕ ಆಮ್ಲೆಟ್ ತಿಂದಿದ್ದಾನೆ. ಈ ವೇಳೆ ಆಮ್ಲೆಟ್​​ ಗಂಟಲಿನಲ್ಲಿ ಸಿಕ್ಕಿಕೊಂಡ ಪರಿಣಾಮ ಆತ ಮೃತಪಟ್ಟಿದ್ದಾನೆ. 

ಸ್ಥಳೀಯರ ಪ್ರಕಾರ ಬಚ್ಚನ್ನಪೇಟೆಯ ನಿವಾಸಿ ಇದುಲಕಂತಿ ಭೂಪಾಲ್ ರೆಡ್ಡಿ (38) ಮೃತ ವ್ಯಕ್ತಿಯಾಗಿದ್ದು, ಈತ ಸ್ಥಳೀಯ ಮದ್ಯದ ಅಂಗಡಿಯೊಂದರಲ್ಲಿ ಕೊಠಡಿಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ. ಈ ವೇಳೆ, ತಿನ್ನುತ್ತಿದ್ದ ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್: ರಾಷ್ಟ್ರ ರಾಜಕಾರಣಕ್ಕೆ 'ಮಹಾ'ಸಿಎಂ; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ !

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

SCROLL FOR NEXT