ಸಾಂದರ್ಭಿಕ ಚಿತ್ರ 
ದೇಶ

ಮದ್ರಾಸ್ ಹೈಕೋರ್ಟ್ ತೀರ್ಪು ಪ್ರಶ್ನಿಸಲು ಆರ್ ಎಸ್ಎಸ್ ನಿರ್ಧಾರ; ನ.6 ರ ಪಥ ಸಂಚಲನ ಮುಂದೂಡಿಕೆ

ಕೆಲವು ಷರತ್ತುಗಳೊಂದಿಗೆ ಪಥ ಸಂಚಲನ ನಡೆಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ನಿರ್ಧರಿಸಿದ್ದು, ನವೆಂಬರ್ 6 ರಂದು ನಿಗದಿಯಾಗಿದ್ದ ಪಥ ಸಂಚಲನವನ್ನು...

ಚೆನ್ನೈ: ಕೆಲವು ಷರತ್ತುಗಳೊಂದಿಗೆ ಪಥ ಸಂಚಲನ ನಡೆಸಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ನಿರ್ಧರಿಸಿದ್ದು, ನವೆಂಬರ್ 6 ರಂದು ನಿಗದಿಯಾಗಿದ್ದ ಪಥ ಸಂಚಲನವನ್ನು ಶನಿವಾರ ಮುಂದೂಡಿದೆ.

"ಆಡಿಟೋರಿಯಂ ಅಥವಾ ಕಾಂಪೌಂಡ್‌ನ ನಾಲ್ಕು ಗೋಡೆಗಳ ಒಳಗೆ ಮಾತ್ರ ಪಥ ಸಂಚಲನ ನಡೆಸಬೇಕು ಎಂದು ಹೈಕೋರ್ಟ್ ನಿರ್ಬಂಧ ವಿಧಿಸಿದ್ದು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇತರ ರಾಜ್ಯಗಳಲ್ಲಿ ಮಾಡಿದಂತೆ ಸಾರ್ವಜನಿಕ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲು ಅನುಮತಿ ಪಡೆಯಲು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ" ಎಂದು ಆರ್‌ಎಸ್‌ಎಸ್ ಮೂಲಗಳು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಇದೇ ವೇಳೆ ಹೇಳಿಕೆ ನೀಡಿರುವ ಆರ್‌ಎಸ್‌ಎಸ್‌ನ ದಕ್ಷಿಣ ವಲಯ ಅಧ್ಯಕ್ಷ ಆರ್.ವನ್ನಿಯರಾಜನ್, ಕಳೆದ 97 ವರ್ಷಗಳಿಂದ ತಮಿಳುನಾಡು ಸೇರಿದಂತೆ ದೇಶದಾದ್ಯಂತ ಶಾಂತಿಯುತವಾಗಿ ಆರ್‌ಎಸ್‌ಎಸ್ ತನ್ನ ಪಥ ಸಂಚಲನ ನಡೆಸುತ್ತಿದೆ ಎಂದಿದ್ದಾರೆ.

"ಸ್ವಾತಂತ್ರ್ಯದ 75ನೇ ವರ್ಷಾಚರಣೆ ಮತ್ತು ಡಾ ಅಂಬೇಡ್ಕರ್ ಅವರ 125 ನೇ ಜನ್ಮದಿನದ ಅಂಗವಾಗಿ, ಆರ್‌ಎಸ್‌ಎಸ್‌ನ ತಮಿಳುನಾಡು ಘಟಕವು ಅಕ್ಟೋಬರ್ 2 ರಂದು 50 ಸ್ಥಳಗಳಲ್ಲಿ ಪಥ ಸಂಚಲನ ನಡೆಸಲು ಯೋಜಿಸಿತ್ತು ಮತ್ತು ಇದಕ್ಕಾಗಿ ಪೊಲೀಸರಿಂದ ಅನುಮತಿ ಕೇಳಲಾಗಿತ್ತು. ಆದರೆ ಪೊಲೀಸರು ತಮ್ಮ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು ಎಂದು ವನ್ನಿಯರಾಜನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಬಳಿಕ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ!

'OYO ಅಲ್ಲ': 2 ಗಂಟೆ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡಿದ್ದ ಜೋಡಿ, 'ನನ್ನ ಇಷ್ಟ' ಎಂದ ಯುವತಿ - Video

ಸುಲಿಗೆ ಪ್ರಕರಣ: 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ಕೆನಡಾ ತನಿಖೆ, ಪಂಜಾಬ್‌ ಮೂಲದವರೇ ಹೆಚ್ಚು!

ಮಲೆ ಮಹದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಭಕ್ತ ಸಾವು; ಪಾದಯಾತ್ರೆ ಸ್ಥಗಿತ!

ಶಿವಕುಮಾರ ಸ್ವಾಮೀಜಿಯ ಆದರ್ಶಗಳು ಆಡಳಿತಕ್ಕೆ ಮಾರ್ಗದರ್ಶನ ನೀಡುತ್ತವೆ: ಉಪ ರಾಷ್ಟ್ರಪತಿ ರಾಧಾಕೃಷ್ಣನ್

SCROLL FOR NEXT