ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ 
ದೇಶ

ದೆಹಲಿ ಸಿಎಂ ಪ್ರಚಾರದಲ್ಲಿ ಬ್ಯುಸಿ, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್‌ ಧರಿಸಿ: ಕೇಂದ್ರ ಆರೋಗ್ಯ ಸಚಿವ ಟಾಂಗ್

ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ದೆಹಲಿ ಮುಖ್ಯಮಂತ್ರಿಗಳು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ ಎಂದು ದೆಹಲಿ ಜನತೆಗೆ ಸಲಹೆ ನೀಡಿದ್ದಾರೆ.

ನವದೆಹಲಿ: ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ದೆಹಲಿ ಮುಖ್ಯಮಂತ್ರಿಗಳು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ ಎಂದು ದೆಹಲಿ ಜನತೆಗೆ ಸಲಹೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ವಾಯು ಮಾಲಿನ್ಯದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ದೆಹಲಿಯ ಜನತೆಗೆ ಮಾಸ್ಕ್‌ ಧರಿಸುವಂತೆ ಒತ್ತಾಯಿಸುತ್ತಿದ್ದೇನೆ. ಏಕೆಂದರೆ, ಕೇಜ್ರಿವಾಲ್‌ ಅವರು ಗುಜರಾತ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ಉಚಿತ ಕೊಡುಗೆಗಳ ಬಗ್ಗೆ ಮಾತನಾಡುವಲ್ಲಿ ಬ್ಯುಸಿ ಇದ್ದಾರೆ. ಕೋಟ್ಯಂತರ ದೆಹಲಿಯ ತೆರಿಗೆ ಹಣವನ್ನು ಈ ಎರಡು ರಾಜ್ಯಗಳಲ್ಲಿ ಜಾಹೀರಾತು ನೀಡಲು ವ್ಯಯಿಸುವಲ್ಲಿ ಬ್ಯುಸಿ ಇದ್ದಾರೆಂದು ಹೇಳಿದ್ದಾರೆ.

ರಾಜಧಾನಿಯಲ್ಲಿ ವಾಯು ಗುಣಮಟ್ಟವು ತೀವ್ರ ಹದಗೆಟ್ಟಿರುವ ಕಾರಣ ಇಲ್ಲಿನ ಪ್ರಾಥಮಿಕ ಶಾಲೆಗಳಿಗೆ ಶನಿವಾರದಿಂದ ರಜೆ ಘೋಷಿಸಲಾಗಿದೆ. ಮುಂದಿನ ಆದೇಶದ ವರೆಗೆ ಶಾಲೆ ತೆರೆಯುವಂತಿಲ್ಲ ಎಂದೂ ಹೇಳಿದೆ. ಇನ್ನು ಶೇ 50ರಷ್ಟು ಸಿಬ್ಬಂದಿಗೆ ಮನೆಯಲ್ಲಿಯೇ ಕೆಲಸ ಮಾಡಲು ಅವಕಾಶ ನೀಡಿದೆ.

ಖಾಸಗಿ ಕಚೇರಿಗಳಿಗೂ ಇದನ್ನೇ ಅನುಸರಿಸುವಂತೆ ಸಲಹೆ ನೀಡಿದೆ. ಮಾಲಿನ್ಯ ಪ್ರಮಾಣವು ಅಪಾಯಕರ ಮಟ್ಟಕ್ಕೆ ಹೆಚ್ಚಿರುವ ಹಿನ್ನೆಲೆ ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ, ಮಾತನಾಡಲು ನಿರ್ಬಂಧ!

SIR ಅಧಿಕಾರಿಗಳನ್ನೇ ಕೂಡಿ ಹಾಕಿದ ಜನತೆ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲ, ಸುರಕ್ಷತೆಗೆ ಕೇಂದ್ರ ಸಶಸ್ತ್ರ ಪಡೆ ನಿಯೋಜಿಸಲು ಸೂಚನೆ

50 ವರ್ಷಗಳ ಬಳಿಕ ಮತ್ತೆ ಚಂದ್ರನತ್ತ ಅಮೆರಿಕ: ನಾಲ್ವರು ಗಗನಯಾತ್ರಿಗಳ ಜೊತೆ ನಾಸಾದ ಆರ್ಟೆಮಿಸ್ II ಮಿಷನ್ ಆರಂಭ!

ಕಾನೂನು ಸುವ್ಯವಸ್ಥೆಗೂ GDPಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ: ಶಾಸಕ ಯತ್ನಾಳ್

SCROLL FOR NEXT