ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಕುಟುಂಬದವರನ್ನು, ನೆರೆಯವರನ್ನು ಹತ್ಯೆ ಮಾಡಿದ 16 ವರ್ಷದ ಬಾಲಕನ ಬಂಧನ

ತ್ರಿಪುರಾದ ದಲೈ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಮೂವರು ಸದಸ್ಯರನ್ನು ಮತ್ತು ನೆರೆಹೊರೆಯವರನ್ನು ಕೊಲೆ ಮಾಡಿ ಶವಗಳನ್ನು ಬಾವಿಗೆ ಎಸೆದಿದ್ದಾನೆ ಎಂದು ಹಿರಿಯ ಪೊಲೀಸ್...

ಅಗರ್ತಲಾ: ತ್ರಿಪುರಾದ ದಲೈ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕನೊಬ್ಬ ತನ್ನ ಕುಟುಂಬದ ಮೂವರು ಸದಸ್ಯರನ್ನು ಮತ್ತು ನೆರೆಹೊರೆಯವರನ್ನು ಕೊಲೆ ಮಾಡಿ ಶವಗಳನ್ನು ಬಾವಿಗೆ ಎಸೆದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರೋಪಿ ಬಾಲಕನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಕಮಲ್‌ಪುರ ಉಪವಿಭಾಗದ ನಿವಾಸಿಯಾದ ಬಾಲಕ ನಿತ್ಯ ಮಾದಕ ದ್ರವ್ಯ ಸೇವಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶನಿವಾರ ಬೆಳಗ್ಗೆ ತಂದೆ ಇಲ್ಲದಿದ್ದಾಗ ತಾಯಿ, ಅಜ್ಜ, 10 ವರ್ಷದ ಸಹೋದರಿ ಹಾಗೂ ನೆರೆಹೊರೆಯವರನ್ನು ಕೊಂದಿದ್ದಾನೆ. ಅಪರಾಧದ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ" ಎಂದು ಅಧಿಕಾರಿ ಹೇಳಿದ್ದಾರೆ.

ಅಧಿಕಾರಿಯ ಪ್ರಕಾರ, ಬಾಲಕನ ತಂದೆ ಮನೆಗೆ ಬಂದಿದ್ದು, ಎಲ್ಲೆಂದರಲ್ಲಿ ರಕ್ತ ಚಿಮ್ಮಿದ್ದು, ಶವಗಳನ್ನು ಮನೆಯ ಪಕ್ಕದ ಬಾವಿಯಲ್ಲಿ ಬಿಸಾಡಿದ್ದಾರೆ. ತಂದೆ ಕೂಗಾಡಿದ ನಂತರ ಗ್ರಾಮಸ್ಥರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿಯ ಮನೆಯಲ್ಲಿ ಬೆಳಗ್ಗೆ 9.30 ರ ಸುಮಾರಿಗೆ ಜೋರಾಗಿ ಸಂಗೀತ ಹಾಕಿರುವುದು ಕೇಳಿಸಿತು ಎಂದು ಗ್ರಾಮಸ್ಥರು ಹೇಳಿದ್ದಾರೆ ಮತ್ತು ಗಂಟೆಗಳ ನಂತರ ಅವರ ತಂದೆ ಬಾವಿಯಲ್ಲಿ ನಾಲ್ಕು ಶವಗಳನ್ನು ನೋಡಿದ್ದಾರೆ. ಶನಿವಾರ ಸಂಜೆ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT