ವಿಷಾಹಾರ ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಾದ ಕೆಜಿಬಿವಿಯ ವಿದ್ಯಾರ್ಥಿನಿಯರು 
ದೇಶ

ತೆಲಂಗಾಣ: ಕಲುಷಿತ 'ಶಾವಿಗೆ ಉಪ್ಪಿಟ್ಟು' ಸೇವಿಸಿದ 60 ವಿದ್ಯಾರ್ಥಿನಿಯರು ಅಸ್ವಸ್ಥ, ಆಸ್ಪತ್ರೆಗೆ  ದಾಖಲು

ಕೆಜಿಬಿವಿಯ 60 ವಿದ್ಯಾರ್ಥಿನಿಯರು ಶನಿವಾರ ಕಲುಷಿತ ಉಪಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 25 ವಿದ್ಯಾರ್ಥಿನಿಯರು ಇನ್ನೂ ಆಸ್ಪತ್ರೆಯಲ್ಲೇ ಇದ್ದಾರೆ. ಆದರೆ, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಸಂಗಾ ರೆಡ್ಡಿ: ಕೆಜಿಬಿವಿಯ 60 ವಿದ್ಯಾರ್ಥಿನಿಯರು ಶನಿವಾರ ಕಲುಷಿತ ಉಪಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 25 ವಿದ್ಯಾರ್ಥಿನಿಯರು ಇನ್ನೂ ಆಸ್ಪತ್ರೆಯಲ್ಲೇ ಇದ್ದಾರೆ. ಆದರೆ, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ಪಟ್ಟಣದ ಉಪನಗರದಲ್ಲಿರುವ ಈ ಶಾಲೆಯಲ್ಲಿ 6 ನೇ ತರಗತಿಯಿಂದ ಇಂಟರ್ ಮೀಡಿಯೇಟ್ ವರೆಗೆ ಸುಮಾರು 300 ವಿದ್ಯಾರ್ಥಿಗಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ.

ಮೂಲಗಳ ಪ್ರಕಾರ, ವಿದ್ಯಾರ್ಥಿಗಳು ಉಪಾಹಾರಕ್ಕಾಗಿ ಶಾವಿಗೆ ಉಪ್ಪಿಟ್ಟು ಮತ್ತು ಸ್ವಲ್ಪ ಹಾಲನ್ನು ಸೇವಿಸಿದ್ದಾರೆ. ಶೀಘ್ರದಲ್ಲೇ, ಅವರು ವಾಂತಿ ಮಾಡಲು ಪ್ರಾರಂಭಿಸಿದರು. ನಂತರ ಅವರಿಗೆ ಬಡಿಸಿದ ಉಪ್ಪಿಟ್ಟಿನಲ್ಲಿ ಹುಳುಗಳು ಕಾಣಿಸಿಕೊಂಡಿವೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದನ್ನು ಗಮನಿಸಿದ ಹಾಸ್ಟೆಲ್ ಆಡಳಿತ ಮಂಡಳಿ 20 ಬಾಲಕಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದೆ.

ಇದೇ ವೇಳೆ ನಾರಾಯಣಖೇಡ್ ಆರ್‌ಡಿಒ ಅಂಬಾದಾಸ್ ರಾಜೇಶ್ವರ್, ತಹಶೀಲ್ದಾರ್ ಮುರಳಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಕೃಷ್ಣಾ ರೆಡ್ಡಿ ಅವರು ಆಸ್ಪತ್ರೆಗೆ ಧಾವಿಸಿದ್ದಾರೆ ಮತ್ತು ನಂತರ ಹಾಸ್ಟೆಲ್‌ಗೆ ಧಾವಿಸಿದಾಗ ಇನ್ನುಳಿದ ಇತರ ವಿದ್ಯಾರ್ಥಿಗಳಿಗೂ ವಾಂತಿಭೇದಿ ಕಾಣಿಸಿಕೊಂಡಿದೆ.

ಅಧಿಕಾರಿಗಳು ಕೆಲವು ಆಟೋಗಳ ಮೂಲಕ ಕೆಲವು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಿದರು ಮತ್ತು ಇತರರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಬೆಳಗಿನ ಉಪಾಹಾರದಲ್ಲಿ ಹುಳುಗಳು ಇವೆ ಎಂದು ವಿದ್ಯಾರ್ಥಿನಿಯರು ಹೇಳಿದರೂ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅನ್ನದಲ್ಲಿ ಹುಳುಗಳು ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ ಎಂದೂ ಹೇಲಿದ್ದಾರೆ.

ಉಳಿದ ವಿದ್ಯಾರ್ಥಿಗಳನ್ನು ಉಪಾಹಾರ ಸೇವಿಸಿದ್ದೀರಾ ಎಂದು ಆರ್‌ಡಿಒ ಕೇಳಿದಾಗ, ಕಲುಷಿತ ಆಹಾರವನ್ನು ಎಸೆದ ನಂತರ ಸಿಬ್ಬಂದಿ ಮತ್ತೆ ಅಡುಗೆ ಮಾಡಿಲ್ಲ ಎಂದು ಹೇಳಿದರು. ಇದರಿಂದ ಕೋಪಗೊಂಡ ಆರ್‌ಡಿಒ, ವಿದ್ಯಾರ್ಥಿಗಳಿಗೆ ಅನ್ನ, ಬೇಳೆ ಬೇಯಿಸುವಂತೆ ಸಿಬ್ಬಂದಿಗೆ ಸೂಚಿಸಿದರು. ಇತರ ವಿದ್ಯಾರ್ಥಿಗಳ ಪೋಷಕರು ಹಾಸ್ಟೆಲ್‌ಗೆ ಧಾವಿಸಿ ಮನೆಗೆ ಕರೆದೊಯ್ದರು.

ಈ ಸಂಬಂಧ ಜಿಲ್ಲಾಧಿಕಾರಿ ಎ. ಶರತ್, ಹಾಸ್ಟೆಲ್‌ನ ವಿಶೇಷ ಅಧಿಕಾರಿ ಮತ್ತು ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT