ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಎಎಪಿ ವಿರುದ್ಧ ಎಫ್ ಐಆರ್ ದಾಖಲಿಸಲು ವಂಚಕ ಸುಕೇಶ್ ಒತ್ತಾಯ

ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಸುಕೇಶ್ ಭ್ರಷ್ಟಾಚಾರ ತಡೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದು ಸದ್ಯ ಜೈಲಿನಲ್ಲಿದ್ದಾನೆ. 

ಎಎಪಿ ಬಗ್ಗೆ ಸತ್ಯ ಹೊರಹಾಕಲು ತುರ್ತಾಗಿ ಸಿಬಿಐ ವಿಚಾರಣೆಗೆ ನಿರ್ದೇಶನ ನೀಡಬೇಕು ಹಾಗೂ ಎಫ್ ಐಆರ್ ದಾಖಲಿಸಲು ನನಗೆ ಅವಕಾಶ ನೀಡಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗರ್ವನರ್ ಗೆ ಬರೆದಿರುವ ಪತ್ರದಲ್ಲಿ ಚಂದ್ರಶೇಖರ್ ಮನವಿ ಮಾಡಿದ್ದಾನೆ.

ತನ್ನ ಮನವಿ ಮಾಧ್ಯಮಗಳಲ್ಲಿ ಬಿಡುಗಡೆಯಾದ ಬಳಿಕ ಕಳೆದೆರಡು ದಿನಗಳಲ್ಲಿ ತೀವ್ರ ಬೆದರಿಕೆ ಬರುತ್ತಿದೆ. ಎಎಪಿ ಮುಖಂಡರಾದ ಸತ್ಯೇಂದರ್ ಜೈನ್ ಮತ್ತು ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರ ಪ್ರಭಾವದಿಂದ ಜೈಲಿನಲ್ಲಿ ಬೆದರಿಕೆ ಬರುತ್ತಿರುವುದಾಗಿ ಆತ ಆರೋಪಿಸಿದ್ದಾನೆ.

ದಕ್ಷಿಣ ಭಾರತದಲ್ಲಿ ಪಕ್ಷದ ಉನ್ನತ ಸ್ಥಾನ ಮಾನ ನೀಡುವ ಭರವಸೆ ನೀಡಿದ್ದರಿಂದ ಎಎಪಿಗೆ 50 ಕೋಟಿ ರೂ. ನೀಡಿರುವುದಾಗಿ ಸುಕೇಶ್ ಆರೋಪಿಸಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?