ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಎಎಪಿ ವಿರುದ್ಧ ಎಫ್ ಐಆರ್ ದಾಖಲಿಸಲು ವಂಚಕ ಸುಕೇಶ್ ಒತ್ತಾಯ

ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಸುಕೇಶ್ ಭ್ರಷ್ಟಾಚಾರ ತಡೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದು ಸದ್ಯ ಜೈಲಿನಲ್ಲಿದ್ದಾನೆ. 

ಎಎಪಿ ಬಗ್ಗೆ ಸತ್ಯ ಹೊರಹಾಕಲು ತುರ್ತಾಗಿ ಸಿಬಿಐ ವಿಚಾರಣೆಗೆ ನಿರ್ದೇಶನ ನೀಡಬೇಕು ಹಾಗೂ ಎಫ್ ಐಆರ್ ದಾಖಲಿಸಲು ನನಗೆ ಅವಕಾಶ ನೀಡಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗರ್ವನರ್ ಗೆ ಬರೆದಿರುವ ಪತ್ರದಲ್ಲಿ ಚಂದ್ರಶೇಖರ್ ಮನವಿ ಮಾಡಿದ್ದಾನೆ.

ತನ್ನ ಮನವಿ ಮಾಧ್ಯಮಗಳಲ್ಲಿ ಬಿಡುಗಡೆಯಾದ ಬಳಿಕ ಕಳೆದೆರಡು ದಿನಗಳಲ್ಲಿ ತೀವ್ರ ಬೆದರಿಕೆ ಬರುತ್ತಿದೆ. ಎಎಪಿ ಮುಖಂಡರಾದ ಸತ್ಯೇಂದರ್ ಜೈನ್ ಮತ್ತು ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರ ಪ್ರಭಾವದಿಂದ ಜೈಲಿನಲ್ಲಿ ಬೆದರಿಕೆ ಬರುತ್ತಿರುವುದಾಗಿ ಆತ ಆರೋಪಿಸಿದ್ದಾನೆ.

ದಕ್ಷಿಣ ಭಾರತದಲ್ಲಿ ಪಕ್ಷದ ಉನ್ನತ ಸ್ಥಾನ ಮಾನ ನೀಡುವ ಭರವಸೆ ನೀಡಿದ್ದರಿಂದ ಎಎಪಿಗೆ 50 ಕೋಟಿ ರೂ. ನೀಡಿರುವುದಾಗಿ ಸುಕೇಶ್ ಆರೋಪಿಸಿದ್ದಾನೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT