ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಎಎಪಿ ವಿರುದ್ಧ ಎಫ್ ಐಆರ್ ದಾಖಲಿಸಲು ವಂಚಕ ಸುಕೇಶ್ ಒತ್ತಾಯ

ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಸುಕೇಶ್ ಭ್ರಷ್ಟಾಚಾರ ತಡೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದು ಸದ್ಯ ಜೈಲಿನಲ್ಲಿದ್ದಾನೆ. 

ಎಎಪಿ ಬಗ್ಗೆ ಸತ್ಯ ಹೊರಹಾಕಲು ತುರ್ತಾಗಿ ಸಿಬಿಐ ವಿಚಾರಣೆಗೆ ನಿರ್ದೇಶನ ನೀಡಬೇಕು ಹಾಗೂ ಎಫ್ ಐಆರ್ ದಾಖಲಿಸಲು ನನಗೆ ಅವಕಾಶ ನೀಡಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗರ್ವನರ್ ಗೆ ಬರೆದಿರುವ ಪತ್ರದಲ್ಲಿ ಚಂದ್ರಶೇಖರ್ ಮನವಿ ಮಾಡಿದ್ದಾನೆ.

ತನ್ನ ಮನವಿ ಮಾಧ್ಯಮಗಳಲ್ಲಿ ಬಿಡುಗಡೆಯಾದ ಬಳಿಕ ಕಳೆದೆರಡು ದಿನಗಳಲ್ಲಿ ತೀವ್ರ ಬೆದರಿಕೆ ಬರುತ್ತಿದೆ. ಎಎಪಿ ಮುಖಂಡರಾದ ಸತ್ಯೇಂದರ್ ಜೈನ್ ಮತ್ತು ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರ ಪ್ರಭಾವದಿಂದ ಜೈಲಿನಲ್ಲಿ ಬೆದರಿಕೆ ಬರುತ್ತಿರುವುದಾಗಿ ಆತ ಆರೋಪಿಸಿದ್ದಾನೆ.

ದಕ್ಷಿಣ ಭಾರತದಲ್ಲಿ ಪಕ್ಷದ ಉನ್ನತ ಸ್ಥಾನ ಮಾನ ನೀಡುವ ಭರವಸೆ ನೀಡಿದ್ದರಿಂದ ಎಎಪಿಗೆ 50 ಕೋಟಿ ರೂ. ನೀಡಿರುವುದಾಗಿ ಸುಕೇಶ್ ಆರೋಪಿಸಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT