ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಎಎಪಿ ವಿರುದ್ಧ ಎಫ್ ಐಆರ್ ದಾಖಲಿಸಲು ವಂಚಕ ಸುಕೇಶ್ ಒತ್ತಾಯ

ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ವಂಚಕ ಸುಕೇಶ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಸುಕೇಶ್ ಭ್ರಷ್ಟಾಚಾರ ತಡೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದು ಸದ್ಯ ಜೈಲಿನಲ್ಲಿದ್ದಾನೆ. 

ಎಎಪಿ ಬಗ್ಗೆ ಸತ್ಯ ಹೊರಹಾಕಲು ತುರ್ತಾಗಿ ಸಿಬಿಐ ವಿಚಾರಣೆಗೆ ನಿರ್ದೇಶನ ನೀಡಬೇಕು ಹಾಗೂ ಎಫ್ ಐಆರ್ ದಾಖಲಿಸಲು ನನಗೆ ಅವಕಾಶ ನೀಡಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗರ್ವನರ್ ಗೆ ಬರೆದಿರುವ ಪತ್ರದಲ್ಲಿ ಚಂದ್ರಶೇಖರ್ ಮನವಿ ಮಾಡಿದ್ದಾನೆ.

ತನ್ನ ಮನವಿ ಮಾಧ್ಯಮಗಳಲ್ಲಿ ಬಿಡುಗಡೆಯಾದ ಬಳಿಕ ಕಳೆದೆರಡು ದಿನಗಳಲ್ಲಿ ತೀವ್ರ ಬೆದರಿಕೆ ಬರುತ್ತಿದೆ. ಎಎಪಿ ಮುಖಂಡರಾದ ಸತ್ಯೇಂದರ್ ಜೈನ್ ಮತ್ತು ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರ ಪ್ರಭಾವದಿಂದ ಜೈಲಿನಲ್ಲಿ ಬೆದರಿಕೆ ಬರುತ್ತಿರುವುದಾಗಿ ಆತ ಆರೋಪಿಸಿದ್ದಾನೆ.

ದಕ್ಷಿಣ ಭಾರತದಲ್ಲಿ ಪಕ್ಷದ ಉನ್ನತ ಸ್ಥಾನ ಮಾನ ನೀಡುವ ಭರವಸೆ ನೀಡಿದ್ದರಿಂದ ಎಎಪಿಗೆ 50 ಕೋಟಿ ರೂ. ನೀಡಿರುವುದಾಗಿ ಸುಕೇಶ್ ಆರೋಪಿಸಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT