ಸಿಜೆಐ ಯುಯು ಲಲಿತ್ 
ದೇಶ

ನ್ಯಾ. ವೈವಿ ಚಂದ್ರಚೂಡ್ ಎದುರು ನನ್ನ 'ಸುಪ್ರೀಂ ಕೋರ್ಟ್ʼ ಯಾನ ಆರಂಭ, ಈಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ: ಸಿಜೆಐ ಲಲಿತ್

ನ್ಯಾ. ವೈವಿ ಚಂದ್ರಚೂಡ್ ಎದುರು ನನ್ನ ʼಸುಪ್ರೀಂಕೋರ್ಟ್ʼ ಯಾನ ಆರಂಭವಾಗಿತ್ತು. ಇದೀಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಯು ಯು ಲಲಿತ್‌ ಹೇಳಿದ್ದಾರೆ.

ನವದೆಹಲಿ: ನ್ಯಾ. ವೈವಿ ಚಂದ್ರಚೂಡ್ ಎದುರು ನನ್ನ ʼಸುಪ್ರೀಂಕೋರ್ಟ್ʼ ಯಾನ ಆರಂಭವಾಗಿತ್ತು. ಇದೀಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಯು ಯು ಲಲಿತ್‌ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಯು ಯು ಲಲಿತ್‌ ಅವರು ತಮ್ಮ ಕರ್ತವ್ಯದ ಕೊನೆಯ ದಿನವಾದ ಸೋಮವಾರ ವೃತ್ತಿಗೆ ವಿದಾಯ ಹೇಳಿದರು. ಈ ವೇಳೆ ತಮ್ಮ ಸಹೋದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದ ಲಲಿತ್ ಅವರು, ತಮ್ಮ ವಕೀಲ ವೃತ್ತಿಯಲ್ಲಿ ಎದುರಾದ ವಿಶಿಷ್ಟ ಸನ್ನಿವೇಶವೊಂದನ್ನು ಅವರು ಈ ಸಂದರ್ಭದಲ್ಲಿ ಬಹಿರಂಗಪಡಿಸಿದರು.

ಸುಪ್ರೀಂ ಕೋರ್ಟ್‌ ವಕೀಲರಾಗಿ ನ್ಯಾ. ಲಲಿತ್‌ ಅವರ ಯಾನ 1980ರ ದಶಕದಲ್ಲಿ ಅಂದಿನ ಸಿಜೆಐ ವೈ ವಿ ಚಂದ್ರಚೂಡ್‌ ಅವರೆದುರು ಪ್ರಕರಣವೊಂದನ್ನು ಪ್ರಸ್ತಾಪಿಸುವ ಮೂಲಕ ಆರಂಭವಾಯಿತು. ಈಗ ಅದೇ ನ್ಯಾ. ವೈ ವಿ ಚಂದ್ರಚೂಡ್‌ ಅವರ ಪುತ್ರ ನ್ಯಾ. ಡಿ ವೈ ಚಂದ್ರಚೂಡ್‌ ಅವರಿಗೆ ಅಧಿಕಾರವನ್ನು ಅವರು ವರ್ಗಾಯಿಸುತ್ತಿದ್ದಾರೆ.

"ಈ ನ್ಯಾಯಾಲಯದಲ್ಲಿ ನನ್ನ ಯಾನ ಕೋರ್ಟ್ ನಂ. 1 ರಲ್ಲಿ ವಾದಿಸುವ ಮೂಲಕ ಪ್ರಾರಂಭವಾಯಿತು. ನಾನು ಬಾಂಬೆಯಲ್ಲಿ ಪ್ರಕರಣವೊಂದರ ವಾದದಲ್ಲಿ ತೊಡಗಿದ್ದೆ, ತರುವಾಯ ಅದೇ ಪ್ರಕರಣವನ್ನು ಇಲ್ಲಿ ಸಿಜೆಐ ವೈ ವಿ ಚಂದ್ರಚೂಡ್ ಅವರ ಮುಂದೆ ಪ್ರಸ್ತಾಪಿಸಲು ಬಂದೆ. ಇಲ್ಲಿಗೆ ನನ್ನ ಯಾನ ಕೊನೆಗೊಳ್ಳುತ್ತಿದೆ. ನಾನು ಈಗ ಅವರ ಮಗ ಮತ್ತು ಪ್ರಖ್ಯಾತ ನ್ಯಾಯಶಾಸ್ತ್ರಜ್ಞ (ನ್ಯಾ. ಡಿ ವೈ ಚಂದ್ರಚೂಡ್‌) ಅವರಿಗೆ ಅಧಿಕಾರ ಹಸ್ತಾಂತರಿಸುತ್ತಿದ್ದೇನೆ" ಎಂದು ಸಿಜೆಐ ಲಲಿತ್ ಹೇಳಿದರು.

ಸಿಜೆಐ ಲಲಿತ್ ಅವರು ನಾಳೆ ನಿವೃತ್ತರಾಗಲಿದ್ದಾರೆ. ಆದರೆ ಗುರುನಾನಕ್ ಜಯಂತಿಯ ನಿಮಿತ್ತ ನ್ಯಾಯಾಲಯ ತೆರೆಯುವುದಿಲ್ಲ. ಹೀಗಾಗಿ ಭಾವಿ ಸಿಜೆಐ ಡಿ ವೈ ಚಂದ್ರಚೂಡ್‌, ನ್ಯಾ. ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಔಪಚಾರಿಕ ಪೀಠದ ಕಲಾಪದ ವೇಳೆ ಕಾನೂನು ಅಧಿಕಾರಿಗಳು, ಹಿರಿಯ ನ್ಯಾಯವಾದಿಗಳು ಹಾಗೂ ವಕೀಲರು ಅವರನ್ನು ಬೀಳ್ಕೊಟ್ಟರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT