ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಾಯೋಗಿಕ ಓಡಾಟ ಆರಂಭ, ನ.11ಕ್ಕೆ ಪ್ರಧಾನಿ ಚಾಲನೆ

ಚೆನ್ನೈ - ಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ರೈಲು ಇಂದು ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು.  

ಚೆನ್ನೈ: ಚೆನ್ನೈ - ಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ರೈಲು ಇಂದು ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು. ಚೆನ್ನೈ-ಬೆಂಗಳೂರು-ಮೈಸೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿದೆ. ಈ ಮಾರ್ಗದಲ್ಲಿ ಇದೇ 11ರಂದು ರೈಲು ಅಧಿಕೃತವಾಗಿ ಸಂಚರಿಸಲಿದೆ. 

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ನವೆಂಬರ್ 11ರಂದು ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದಲ್ಲಿ ಮೊದಲ ಸ್ವದೇಶಿ ನಿರ್ಮಿತ ಅತಿ ವೇಗದ ರೈಲು ಆಗಿದ್ದು ದೇಶದಲ್ಲಿ 5ನೆಯದ್ದಾಗಿದೆ.ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ 2019ರ ಫೆಬ್ರವರಿ 15ರಂದು ದೆಹಲಿ-ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗವಾಗಿ ಸಂಚಾರಕ್ಕೆ ಮೊದಲ ಬಾರಿಗೆ ಚಾಲನೆ ನೀಡಲಾಗಿತ್ತು. 

ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಹೆಚ್ಚು ಒತ್ತು ನೀಡುವ ಕೇಂದ್ರ ಸರ್ಕಾರ, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅದರ ಒಂದು ಭಾಗವಾಗಿದೆ. ಕಳೆದ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ 75 ವಾರಗಳ ಕಾಲ ದೇಶದ 75 ಭಾಗಗಳಿಗೆ 75 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸಂಪರ್ಕಿಸಲಾಗುವುದು ಎಂದು ಹೇಳಿದ್ದರು. 

ವಂದೇ ಭಾರತ್ ವಿಶೇಷತೆಯೇನು?: ವೇಗ, ಸುರಕ್ಷತೆ ಮತ್ತು ಸೇವೆ ಈ ರೈಲಿನ ಪ್ರಮುಖ ವಿಶೇಷತೆಯಾಗಿದೆ. ಚೆನ್ನೈಯ ಇಂಟಗ್ರಲ್ ಕೋಚ್ ಫ್ಯಾಕ್ಟರಿ, ರೈಲ್ವೆ ಉತ್ಪಾದನಾ ಘಟಕ ಕೇವಲ 18 ತಿಂಗಳಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಉತ್ಪಾದಿಸಿವೆ. 

ವಂದೇ ಭಾರತ್ ಎಕ್ಸ್ ಪ್ರೆಸ್ ಗರಿಷ್ಠ 160 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು ಶತಾಬ್ರಿ ರೈಲಿನ ಮಾದರಿಯಲ್ಲಿರಲಿದ್ದು ಪ್ರಯಾಣಿಕರಿಗೆ ಉತ್ತಮ ಪ್ರಯಾಣ ಅನುಭವ ನೀಡುತ್ತದೆ. ವೇಗ ಮತ್ತು ಅನುಕೂಲ ನಿಟ್ಟಿನಲ್ಲಿ ಭಾರತೀಯ ರೈಲ್ವೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT