ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರೊಂದಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ 
ದೇಶ

ಸಿಜೆಐ ಯುಯು ಲಲಿತ್ ರ ಉತ್ತಮ ಕೆಲಸಗಳನ್ನು ಮುಂದುವರಿಸುವೆ: ನೂತನ ಸಿಜೆಐ ಚಂದ್ರಚೂಡ್

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಉತ್ತರಾಧಿಕಾರಿಯಾಗಿ ಮಾಡಬೇಕಾದ ಕೆಲಸಗಳು ತುಂಬ ಇವೆ. ಅವರು ಪ್ರಾರಂಭಿಸಿದ "ಒಳ್ಳೆಯ ಕೆಲಸವನ್ನು" ಮುಂದುವರಿಸುವುದಾಗಿ ಸುಪ್ರೀಂ ಕೋರ್ಟ್ ನೂತನ...

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಉತ್ತರಾಧಿಕಾರಿಯಾಗಿ ಮಾಡಬೇಕಾದ ಕೆಲಸಗಳು ತುಂಬ ಇವೆ. ಅವರು ಪ್ರಾರಂಭಿಸಿದ "ಒಳ್ಳೆಯ ಕೆಲಸವನ್ನು" ಮುಂದುವರಿಸುವುದಾಗಿ ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಹೇಳಿದ್ದಾರೆ.

ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಲಲಿತ್ ಅವರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಯುಯು ಲಲಿತ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ಸುಧಾರಣೆಗಳನ್ನು ತಂದಿದ್ದಾರೆ. ಅವರ ಉತ್ತಮ ಕೆಲಸಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.

ಸಿಜೆಐ ಲಲಿತ್ ಅವರು ಪ್ರಮುಖ ಸಾಂವಿಧಾನಿಕ ವಿಷಯಗಳ ಪಟ್ಟಿಗೆ ಆದ್ಯತೆ ನೀಡಿದರು, ಬಾಕಿ ಉಳಿದ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಿದರು. "ವಸಾಹತುಶಾಹಿ ನ್ಯಾಯ ವಿತರಣಾ ವ್ಯವಸ್ಥೆಯಿಂದ ಜನರನ್ನು ತಲುಪಬೇಕಾದ ವ್ಯವಸ್ಥೆಗೆ" ಪರಿವರ್ತಿಸಲು ಸಹಾಯ ಮಾಡಿದರು ಎಂದು ನೂತನ ಸಿಜೆಐ ಚಂದ್ರಚೂಡ್ ಹೇಳಿದರು.

ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡ ಚಂದ್ರಚೂಡ್ ಅವರು ಸಿಜೆಐ ಆಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿದ್ದು, ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT