ಸುಪ್ರೀಂಕೋರ್ಟ್ 
ದೇಶ

ಶಿಕ್ಷಣ ಲಾಭ ಗಳಿಸುವ ವ್ಯವಹಾರವಲ್ಲ, ಬೋಧನಾ ಶುಲ್ಕವನ್ನು ಕಡಿಮೆ ಮಾಡಬೇಕು: ಸುಪ್ರೀಂ

ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‌ಗಳ ವಾರ್ಷಿಕ ಬೋಧನಾ ಶುಲ್ಕವನ್ನು 24 ಲಕ್ಷ ರೂ.ಗೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಂಧ್ರಪ್ರದೇಶ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ನವದೆಹಲಿ: ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‌ಗಳ ವಾರ್ಷಿಕ ಬೋಧನಾ ಶುಲ್ಕವನ್ನು 24 ಲಕ್ಷ ರೂ.ಗೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಂಧ್ರಪ್ರದೇಶ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು ಶುಲ್ಕ ಹೆಚ್ಚಳವು ಅಸಮಂಜಸವಾಗಿದೆ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಆರ್ ಶಾ ಮತ್ತು ಎಂ.ಎಂ ಸುಂದ್ರೇಶ್ ಅವರಿದ್ದ ಪೀಠವು ಈ ಹಿಂದೆ ನಿಗದಿಪಡಿಸಿದ ಶುಲ್ಕದ ಏಳು ಪಟ್ಟು ಅಂದರೆ 24 ಲಕ್ಷ ರೂ.ಗೆ ಹೆಚ್ಚಿಸಿರುವುದು ಯಾವುದೇ ರೀತಿಯಲ್ಲಿ ಸಮರ್ಥನೀಯವಲ್ಲ ಎಂದು ಹೇಳಿದೆ. ಶಿಕ್ಷಣವು ಲಾಭ ಗಳಿಸುವ ವ್ಯವಹಾರವಲ್ಲ ಎಂದು ರಾಜ್ಯ ಸರ್ಕಾರ ಮತ್ತು ಅರ್ಜಿದಾರ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿದೆ. 

ಬೋಧನಾ ಶುಲ್ಕಗಳು ಯಾವಾಗಲೂ ಕೈಗೆಟುಕುವಂತಿರಬೇಕು, ಇದನ್ನು ಎಲ್ಲಾ ವರ್ಗಗಳ ವಿದ್ಯಾರ್ಥಿಗಳು ಭರಿಸುವಂತಿರಬೇಕು. ಆದ್ದರಿಂದ, ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ(NALSA) ಮತ್ತು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಮತ್ತು ಸಮನ್ವಯ ಯೋಜನಾ ಸಮಿತಿ (MCPC) ವೈದ್ಯಕೀಯ ಕಾಲೇಜುಗಳ ಮೇಲೆ 2.5 ಲಕ್ಷ ವೆಚ್ಚವನ್ನು  ವಿಧಿಸಿತು. 

ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‌ಗಳ ವಾರ್ಷಿಕ ಬೋಧನಾ ಶುಲ್ಕವನ್ನು 24 ಲಕ್ಷ ರೂ.ಗೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು, ಗಂಡಕ್ ನದಿಯಲ್ಲಿ 3, ಮಹಾರಾಜ್‌ಗಂಜ್‌ನಲ್ಲಿ 4 ಮೃತದೇಹ ಪತ್ತೆ!

ಟಿ20 ವಿಶ್ವಕಪ್ ಗೆದ್ದ ನಂತರ ಎರಡೇ ತಿಂಗಳಲ್ಲಿ ತಂಡದಿಂದ ಕೈಬಿಟ್ಟಿದ್ದಕ್ಕೆ ಅರಗಿಸಿಕೊಳ್ಳಲು ಆಗಲಿಲ್ಲ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್ ಯಾದವ್

ನೇಪಾಳದಲ್ಲಿ ವಿನಾಶಕಾರಿ ಪ್ರವಾಹ: ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ; 626 ಮೃತದೇಹ ಪತ್ತೆ, 2000ಕ್ಕೂ ಹೆಚ್ಚು ಜನ ನಾಪತ್ತೆ

ಸ್ಯಾಟಲೈಟ್ ಚಿತ್ರಗಳಲ್ಲಿ ಭೀಕರ ದೃಶ್ಯ: ಹಿಮಾಲಯದ ಪ್ರವಾಹಕ್ಕೆ ನೇಪಾಳ-ಚೀನಾ ಗಡಿ ಮಾರ್ಗವೇ ಮಾಯ, ಸಾವಿನ ಸಂಖ್ಯೆ 623ಕ್ಕೇರಿಕೆ!

ನೇಪಾಳ ಪ್ರವಾಹ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ CEO ನಾಪತ್ತೆ