ಪ್ರಮೋದ್ ಸಾವಂತ್ 
ದೇಶ

ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷ ಅನುಭವವಿಲ್ಲದವರಿಗೆ ಸರ್ಕಾರಿ ಕೆಲಸವಿಲ್ಲ: ಗೋವಾ ಸಿಎಂ ಪ್ರಮೋದ್ ಸಾವಂತ್

ನುರಿತ ಮತ್ತು ಪ್ರತಿಭಾವಂತ ಉದ್ಯೋಗಿಗಳನ್ನು ಪಡೆಯುವ ಪ್ರಯತ್ನದಲ್ಲಿ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷದ ಅನುಭವವನ್ನು ಕಡ್ಡಾಯಗೊಳಿಸಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

ಪಣಜಿ: ನುರಿತ ಮತ್ತು ಪ್ರತಿಭಾವಂತ ಉದ್ಯೋಗಿಗಳನ್ನು ಪಡೆಯುವ ಪ್ರಯತ್ನದಲ್ಲಿ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷದ ಅನುಭವವನ್ನು ಕಡ್ಡಾಯಗೊಳಿಸಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

ಇಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗ ಅನುಭವವಿಲ್ಲದೆ ನೇರ ಉದ್ಯೋಗ ನೀಡುವುದಿಲ್ಲ.

'ಪದವಿ ಪಾಸಾಗುವ ಮುನ್ನ ಅನೇಕರು ಲೆಕ್ಕಪತ್ರ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಘಟನೆಗಳೂ ಇವೆ. ಪಿಎಸ್‌ಐ ಹುದ್ದೆಗಳಿಗೂ ಇದೇ ಟ್ರೆಂಡ್‌ ಇತ್ತು. ಇನ್ನು ಮುಂದೆ ಇದು ಆಗುವುದಿಲ್ಲ. ಸರ್ಕಾರಿ ಉದ್ಯೋಗಕ್ಕೆ ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷದ ಅನುಭವದ ಅಗತ್ಯವಿದೆ' ಎಂದು ಸಾವಂತ್ ಹೇಳಿದರು.

ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ನಡೆಯುವ ಸಮಯದಲ್ಲಿ, ಹಿಂದಿನ ಕೆಲಸದ ಅನುಭವವನ್ನು ಕಡ್ಡಾಯವಾಗಿ ಹುಡುಕಲಾಗುತ್ತದೆ. ಅವನು ಅಥವಾ ಅವಳು ಉತ್ತೀರ್ಣರಾದ ನಂತರ ಅವರಿಗೆ (ಅನುಭವವಿಲ್ಲದೆ) ಸರ್ಕಾರಿ ಕೆಲಸ ಸಿಗುತ್ತದೆ ಎಂಬ ಭಾವನೆ ಇದೆ. ಈಗ ಅಭ್ಯರ್ಥಿಗಳು ಸರ್ಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮುನ್ನ ಖಾಸಗಿ ವಲಯದಲ್ಲಿ ಉದ್ಯೋಗವನ್ನು ಹುಡುಕಬೇಕಾಗುತ್ತದೆ'.

'ಗೋವಾ ಸರ್ಕಾರ ಒಂದೆಡೆ ಮೂಲಸೌಕರ್ಯ ಸೃಷ್ಟಿಸುತ್ತಿದ್ದರೆ, ಮತ್ತೊಂದೆಡೆ ಮಾನವ ಸಂಪನ್ಮೂಲ ಸೃಷ್ಟಿಸಲು ಯೋಜನೆ ರೂಪಿಸಿದೆ. ಮಾನವ ಸಂಪನ್ಮೂಲದ ಈ ಪ್ರತಿಭೆಯನ್ನು ಖಾಸಗಿ ಮತ್ತು ಸರ್ಕಾರ ಹೇಗೆ ಬಳಸಿಕೊಳ್ಳಬಹುದು ಎಂಬುದರ ಕುರಿತು ನಾವು ಯೋಚಿಸುತ್ತಿದ್ದೇವೆ' ಎಂದು ಸಾವಂತ್ ಹೇಳಿದರು.

'ನಾವು ನೇರವಾಗಿ (ಅನುಭವವಿಲ್ಲದೆ) ಉದ್ಯೋಗಗಳನ್ನು ನೀಡುವುದನ್ನು ನಿಲ್ಲಿಸಲು ಯೋಜಿಸುತ್ತಿದ್ದೇವೆ. ಈ ಅಭ್ಯಾಸವು ನಮಗೆ ನುರಿತ ಮಾನವ ಸಂಪನ್ಮೂಲಗಳನ್ನು ನೀಡುತ್ತದೆ.ನಾವು ನೇಮಕಾತಿಗಳ ನಿಯಮಗಳು ಮತ್ತು ನಿಬಂಧನೆಗಳನ್ನು ಬದಲಾಯಿಸಲು ನಿರ್ಧಿಸಿದ್ದೇವೆ. ಕಳೆದ 30 ವರ್ಷಗಳಿಂದ ಅವರು ಬದಲಾಗಿಲ್ಲ' ಎಂದು ಅವರು ತಿಳಿಸಿದರು.

ಪದವೀಧರರು ಮತ್ತು ಇತರರು ತಮ್ಮ ವಿದ್ಯಾರ್ಹತೆಯನ್ನು ಉನ್ನತೀಕರಿಸಲು ಹೆಚ್ಚುವರಿ ಕೋರ್ಸ್‌ಗಳನ್ನು ಕಲಿಯುವಂತೆ ಮುಖ್ಯಮಂತ್ರಿಗಳು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT