ಪಿ.ಚಿದಂಬರಂ 
ದೇಶ

ಮೊರ್ಬಿ ದುರಂತದ ನಂತರ ಸರ್ಕಾರದ ಪರವಾಗಿ ಯಾರೂ ರಾಜೀನಾಮೆ ನೀಡಿಲ್ಲ ಅಥವಾ ಕ್ಷಮೆ ಕೇಳಿಲ್ಲ: ಚಿದಂಬರಂ

ಗುಜರಾತ್‌ನಲ್ಲಿ 141 ಮಂದಿ ಬಲಿ ಪಡೆದ ಮೊರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು, ದುರಂತದ ನಂತರ...

ಅಹಮದಾಬಾದ್: ಗುಜರಾತ್‌ನಲ್ಲಿ 141 ಮಂದಿ ಬಲಿ ಪಡೆದ ಮೊರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು, ದುರಂತದ ನಂತರ ಸರ್ಕಾರದ ಪರವಾಗಿ ಯಾರೂ ರಾಜೀನಾಮೆ ನೀಡಿಲ್ಲ ಅಥವಾ ಕ್ಷಮೆಯನ್ನೂ ಕೇಳಿಲ್ಲ ಎಂದರು.

ಇಂದು ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಿದಂಬರಂ, ಗುಜರಾತನ್ನು ದೆಹಲಿಯಿಂದ ಆಳಲಾಗುತ್ತಿದೆಯೇ ಹೊರತು ಇಲ್ಲಿನ ಮುಖ್ಯಮಂತ್ರಿಯಿಂದಲ್ಲ ಎಂದರು.

"ಮೊರ್ಬಿ ಸೇತುವೆ ಕುಸಿತ ಗುಜರಾತ್‌ ಹೆಸರಿಗೆ ಧಕ್ಕೆ ತಂದಿದೆ... ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದ್ದು, ದುರಂತದ ಬಗ್ಗೆ ಸರ್ಕಾರದ ಪರವಾಗಿ ಯಾರೂ ಕ್ಷಮೆ ಯಾಚಿಸಿಲ್ಲ ಅಥವಾ ಘಟನೆಯ ಹೊಣೆ ಹೊತ್ತು ಯಾರೂ ರಾಜೀನಾಮೆ ನೀಡಿಲ್ಲ ಎಂದರು.

"ಗುಜರಾತ್ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ನೀಡಿದೆ. ಹೈಕೋರ್ಟ್ ಈ ಎಲ್ಲಾ ಪ್ರಶ್ನೆಗಳನ್ನು ಮತ್ತು ಇತರ ಪ್ರಶ್ನೆಗಳನ್ನು ಎತ್ತುತ್ತದೆ ಮತ್ತು ಉತ್ತರಗಳನ್ನು ಪಡೆಯುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಚಿದಂಬರಂ ಹೇಳಿದರು.

ಗುಜರಾತ್‌ ನ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಪಿ. ಚಿದಂಬರಂ ಅವರು, "ಬಿಜೆಪಿ ಸರ್ಕಾರವು 1998 ರಿಂದ ನಿರಂತರವಾಗಿ ಅಧಿಕಾರದಲ್ಲಿದೆ. ಕಳೆದ ಆರು ವರ್ಷಗಳಲ್ಲಿ ಗುಜರಾತ್ ಮೂವರು ಮುಖ್ಯಮಂತ್ರಿಗಳನ್ನು ಕಂಡಿದೆ. 2023ರ ಚುನಾವಣೆ ನಂತರ ಭೂಪೇಂದ್ರ ಪಟೇಲ್‌ಗೂ ಬಾಗಿಲು ತೋರಿಸುವ ಸಾಧ್ಯತೆ ಇದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT