ಅಜಂ ಖಾನ್ 
ದೇಶ

ಅಜಂ ಖಾನ್ ಅನರ್ಹತೆ: ನವೆಂಬರ್ 10ರ ವರೆಗೆ ಉಪಚುನಾವಣೆ ಘೋಷಿಸದಂತೆ ಇಸಿಗೆ 'ಸುಪ್ರೀಂ' ಸೂಚನೆ

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಜಂ ಖಾನ್‌ ಅವರನ್ನು ಅನರ್ಹಗೊಳಿಸಿದ ನಂತರ ತೆರವಾಗಿದ್ದ ಉತ್ತರ ಪ್ರದೇಶದ ರಾಂಪುರ ಸದರ್‌ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್‌....

ನವದೆಹಲಿ: ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಜಂ ಖಾನ್‌ ಅವರನ್ನು ಅನರ್ಹಗೊಳಿಸಿದ ನಂತರ ತೆರವಾಗಿದ್ದ ಉತ್ತರ ಪ್ರದೇಶದ ರಾಂಪುರ ಸದರ್‌ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್‌ 10ರವರೆಗೆ ಉಪ ಚುನಾವಣೆ ಅಧಿಸೂಚನೆ ಹೊರಡಿಸದಂತೆ ಸುಪ್ರೀಂ ಕೋರ್ಟ್‌ ಬುಧವಾರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ, ತಮ್ಮ ಶಿಕ್ಷೆಗೆ ತಡೆಯಾಜ್ಞೆ ಕೋರಿ ಖಾನ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರವೇ ನಡೆಸಿ ತೀರ್ಪು ನೀಡುವಂತೆ ವಿಶೇಷ ಸೆಷನ್ಸ್ ನ್ಯಾಯಾಲಯಕ್ಕೆ ಸೂಚಿಸಿದೆ.

ಖಾನ್ ಅವರ ಅರ್ಜಿ ವಿಚಾರಣೆ ನಡೆಸಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದ ನಂತರ ಚುನಾವಣಾ ಆಯೋಗ ನವೆಂಬರ್ 11 ಅಥವಾ ನಂತರ ಉಪಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಕ್ಟೋಬರ್ 27 ರಂದು ದ್ವೇಷ ಭಾಷಣ ಪ್ರಕರಣದಲ್ಲಿ ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ ರಾಂಪುರ ನ್ಯಾಯಾಲಯ, ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ನೀಡಿದೆ.

ನಂತರ ಅಕ್ಟೋಬರ್ 28 ರಂದು ಉತ್ತರ ಪ್ರದೇಶ ವಿಧಾನಸಭೆಯ ಸೆಕ್ರೆಟರಿಯೇಟ್ ಅಜಂ ಖಾನ್ ಅವರನ್ನು ವಿಧಾಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವುದಾಗಿ ಘೋಷಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT