ತಮಿಳುನಾಡು ರಾಜ್ಯಪಾಲ ಆರ್ಎನ್.ರವಿ. 
ದೇಶ

ರಾಜ್ಯಪಾಲರ ಕೂಡಲೇ ವಜಾಗೊಳಿಸಿ: ರಾಷ್ಟ್ರಪತಿಗಳಿಗೆ ತಮಿಳುನಾಡು ಆಡಳಿತಾರೂಢ ಡಿಎಂಕೆ ಪಕ್ಷ ಮನವಿ

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಅವರನ್ನು ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಮನವಿ ಸಲ್ಲಿಸಿದೆ.

ನವದೆಹಲಿ/ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಅವರನ್ನು ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಮನವಿ ಸಲ್ಲಿಸಿದೆ.

ರಾಜ್ಯಪಾಲ ಆರ್.ಎನ್.ರವಿ ಅವರು “ಶಾಂತಿಗೆ ಬೆದರಿಕೆ’’ ಆಗಿದ್ದು, ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಾರೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರಕ್ಕೆ ಜನರ ಸೇವೆಗೆ ಅಡ್ಡಿಪಡಿಸಿದ ಕಾರಣ ಅವರನ್ನು ಕೂಡಲೇ ಪದಚ್ಯುತಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.

"ರಾಜ್ಯಪಾಲ ಆರ್‌.ಎನ್. ರವಿ ಅವರು ಸಂವಿಧಾನ ಹಾಗೂ  ಕಾನೂನನ್ನು ಸಂರಕ್ಷಿಸಲು, ರಕ್ಷಿಸಲು ಮತ್ತು ಸಮರ್ಥಿಸಿಕೊಳ್ಳುತ್ತೇನೆಂಬ ವಚನವನ್ನು ಉಲ್ಲಂಘಿಸಿದ್ದಾರೆ" ಎಂದು  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಡಿಎಂಕೆ ತಿಳಿಸಿದೆ.

ಇದೇ ವೇಳೆ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮ್ಮತಿ ನೀಡಲು ರಾಜ್ಯಪಾಲರು ಅನಗತ್ಯವಾಗಿ ವಿಳಂಬ ಮಾಡುತ್ತಾರೆ ಎಂದು ಡಿಎಂಕೆ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT