ರಂಜನ್ ಗೊಗೊಯ್ 
ದೇಶ

ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೊಯ್ ನಾಮನಿರ್ದೇಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'

ರಾಜ್ಯಸಭೆಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ನಾಮನಿರ್ದೇಶನ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ರಾಜ್ಯಸಭೆಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ನಾಮನಿರ್ದೇಶನ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರ ಪೀಠ, ಇದೊಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಹೇಳಿದೆ. ಮಾಜಿ ಸಿಜೆಐ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲು ಅರ್ಹರಲ್ಲ ಎಂದು ಅರ್ಜಿದಾರ ಸತೀಶ್ ಎಸ್ ಕಂಬಿಯಾ ಅವರ ವಕೀಲರು ಅರ್ಜಿ ಸಲ್ಲಿಸಿದರು. ಅರ್ಹತೆಯನ್ನು ಯಾರು ನಿರ್ಧರಿಸುತ್ತಾರೆ ಎಂದು ಪೀಠ ಕೇಳಿದೆ? ಇನ್ನು ಈ ಅರ್ಜಿಯ ಮುಖ್ಯತ್ವವಿಲ್ಲ ಏನು ಎಂಬುದು ಕಂಡುಬಂದಿಲ್ಲ. ಈ ಅರ್ಜಿ ಸಂಬಂಧ ನಿಮ್ಮ ಮೇಲೆ ಯಾವುದೇ ದಂಡವನ್ನು ವಿಧಿಸದಿರುವುದು ನಿಮ್ಮ ಅದೃಷ್ಟ ಎಂದು ಪೀಠ ಹೇಳಿದೆ.

ನ್ಯಾಯಮೂರ್ತಿ ಗೊಗೊಯ್ ಅವರು ಅಯೋಧ್ಯೆ ಭೂ ವಿವಾದ ಪ್ರಕರಣ ಸೇರಿದಂತೆ ಹಲವು ಪ್ರಮುಖ ನಿರ್ಧಾರ ಪೀಠಗಳ ನೇತೃತ್ವವಹಿಸಿದ್ದರು. ಇನ್ನು 2020ರ ಮಾರ್ಚ್ 16 ರಂದು ಅವರನ್ನು ಸರ್ಕಾರವು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತು. 

ರಫೇಲ್ ಫೈಟರ್ ಜೆಟ್ ಒಪ್ಪಂದ ಮತ್ತು ಪ್ರಸಿದ್ಧ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದಂತಹ ವಿಷಯಗಳ ಬಗ್ಗೆ ತೀರ್ಪು ನೀಡಿದ ಪೀಠಗಳ ನೇತೃತ್ವವನ್ನು ಗೊಗೊಯ್ ವಹಿಸಿದ್ದರು. ಗೊಗೊಯ್ 13 ತಿಂಗಳ ಅವಧಿಯ ನಂತರ ನವೆಂಬರ್ 2019ರಲ್ಲಿ ಸಿಜೆಐ ಆಗಿ ನಿವೃತ್ತರಾದರು. ಗೊಗೊಯ್ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಭಾರತದ ಮೊದಲ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರು ರಾಜ್ಯಸಭಾ ಸದಸ್ಯರಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಟಿಕೆಟ್‌ನಲ್ಲಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT