ಸಂಜಯ್ ರಾವತ್ 
ದೇಶ

ಇಂತಹ ರಾಜಕೀಯ ದ್ವೇಷವನ್ನು ನಾವೆಂದೂ ನೋಡಿರಲಿಲ್ಲ: ಸಂಜಯ್ ರಾವತ್

ಭೂಹಗರಣದಿಂದ ಜೈಲು ಸೇರಿದ್ದ ಶಿವಸೇನಾ ಮುಖಂಡ ಸಂಜಯ್ ರಾವತ್ ನಿನ್ನೆ ಜೈಲಿನಿಂದ ಹೊರಗೆ ಬಂದಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ರಾಜಕೀಯ ದ್ವೇಷವನ್ನು ನಾವೆಂದೂ ನೋಡಿರಲಿಲ್ಲ ಎಂದರು.

ಮುಂಬೈ:  ಭೂಹಗರಣದಿಂದ ಜೈಲು ಸೇರಿದ್ದ ಶಿವಸೇನಾ ಮುಖಂಡ ಸಂಜಯ್ ರಾವತ್ ನಿನ್ನೆ ಜೈಲಿನಿಂದ ಹೊರಗೆ ಬಂದಿದ್ದಾರೆ. ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ರಾಜಕೀಯ ದ್ವೇಷವನ್ನು ನಾವೆಂದೂ ನೋಡಿರಲಿಲ್ಲ ಎಂದರು.

ಇಂದು ಉದ್ಧವ್ ಠಾಕ್ರೆ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗುತ್ತೇನೆ. ಯಾರ ಮೇಲೆ ಯಾವುದೇ ದೂರು ಇಲ್ಲ. ಆದರೆ, ಇಂತಹ ರಾಜಕೀಯ ದ್ವೇಷವನ್ನು ನಾವೆಂದೂ ನೋಡಿರಲಿಲ್ಲ. ಯಾವುದೇ ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ದೂಷಿಸುವುದಿಲ್ಲ ಎಂದು ಅವರು ಹೇಳಿದರು. 

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಅವರ ಕೆಲವೊಂದು ಒಳ್ಳೆಯ ನಿರ್ಧಾರಗಳನ್ನು ಸ್ವಾಗತಿಸುತ್ತೇನೆ. ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೆಲವೊಂದು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಂದಲೇ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ ಅಂತಾ ಅನ್ನಿಸುತ್ತಿದೆ. ಫಡ್ನವೀಸ್ ರಾಜ್ಯವನ್ನು ಮುನ್ನಡೆಸುತ್ತಿದ್ದಾರೆ ಎಂದರು. 

ಪತ್ರಾ ಚಾಲ್ ಮರು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇದೇ ಆಗಸ್ಟ್ 1 ರಂದು ಇಡಿಯಿಂದ ಬಂಧನಕ್ಕೊಳಗಾಗಿ ಅರ್ಥರ್ ಜೈಲಿನಲ್ಲಿದ್ದ ಸಂಜಯ್ ರಾವತ್ ಅವರಿಗೆ ಮುಂಬೈ ವಿಶೇಷ ನ್ಯಾಯಾಲಯ ಬುಧವಾರ ಸಂಜೆ ಜಾಮೀನು ನೀಡಿದ ನಂತರ ಅವರು ಜೈಲಿನಿಂದ ಹೊರಗೆ ಬಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT