ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಹಚರ ಸೇರಿ ಮೂವರ ಬಂಧನ

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜೈಶ್-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಸಹಚರ ಸೇರಿ ಮೂವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರಿಂದ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬಂಧಿತರನ್ನು ಪುಚಿಲ್ ಪಂಪೋರಾದ ಚಾಲಕ ಮೊಹಮ್ಮದ್ ಯಾಸೀನ್, ಫರ್ಹಾನ್ ಫಾರೂಕ್ ಮತ್ತು ಡ್ರಂಗ್ಬಾಲ್ ಪಾಂಪೋರ್‌ನ ಫಾರೂಕ್ ಅಹ್ಮದ್ ಎಂದು ಗುರುತಿಸಲಾಗಿದೆ.

ಮಂಗಳವಾರ ಮತ್ತು ಬುಧವಾರದ ಮಧ್ಯರಾತ್ರಿ ತ್ರಿಕೂಟ ನಗರ ಠಾಣೆಯ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದ ವೇಳೆ ನರ್ವಾಲ್‌ನಲ್ಲಿ ತೈಲ ಟ್ಯಾಂಕರ್ ವೊಂದನ್ನು ತೆಡೆದಿದ್ದಾರೆ.

ಈ ವೇಳೆ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ತನ್ನು ಇಬ್ಬರು ಸಹಚರರೊಂದಿಗೆ ಪೊಲೀಸರೊಂದಿಗೆ ಜಗಳಕ್ಕಿಳಿದಿದ್ದಾನೆ. ಈ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ

ವಿಚಾರಣೆಯ ವೇಳೆ ಮೂವರ ಪೈಕಿ ಓರ್ವ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವನೆಂದು ತಿಳಿದುಬಂದಿದೆ. ಪಾಕಿಸ್ತಾನದಲ್ಲಿರುವ ಜೆಎಂನ ಹ್ಯಾಂಡ್ಲರ್ ಶಹಬಾಜ್ ಸೂಚನೆಯ ಮೇರೆಗೆ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳಲು ಜಮ್ಮುವಿಗೆ ಬಂದಿರುವುದಾಗಿ ಚಾಲಕ ಯಾಸೀನ್ ಬಹಿರಂಗಪಡಿಸಿದ್ದಾನೆ.

ತೈಲ ಟ್ಯಾಂಕರ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ರವಾನೆಯನ್ನು ಮಾಡುತ್ತಿದ್ದ ಬಗ್ಗೆ ಯಾಸೀನ್ ತಪ್ಪೊಪ್ಪಿಕೊಂಡಿದ್ದಾನೆ.

ಇದರ ನಂತರ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಟ್ಯಾಂಕರ್​ನ್ನು ಮತ್ತೊಮ್ಮೆ ಶೋಧಿಸಲಾಯಿತು ಈ ವೇಳೆ ಟ್ಯಾಂಕರ್ ನಲ್ಲಿ ಮೂರು ಎಕೆ -56 ರೈಫಲ್ಗಳು, ಒಂದು ಪಿಸ್ತೂಲ್, ಒಂಬತ್ತು ಮ್ಯಾಗಜೀನ್ಗಳು, 191 ಸುತ್ತಿನ ಮದ್ದುಗುಂಡುಗಳು ಮತ್ತು ಆರು ಗ್ರೆನೇಡ್ಗಳು ದೊರೆತಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಹಾಗೂ ಅವರ ಪೂರ್ವಾಪರಗಳನ್ನು ತಿಳಿದುಕೊಳ್ಳಲು ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT