ಎನ್ ಸಿಪಿ ಮುಖಂಡರಾದ ಸುಪ್ರೀಯಾ ಸುಳೆ ಮತ್ತಿತರೊಂದಿಗೆ ರಾಹುಲ್ ಗಾಂಧಿ 
ದೇಶ

ಗುಜರಾತ್ ಚುನಾವಣೆ: ಕೈ ಜೊತೆ ಮೈತ್ರಿ ಮಾಡಿಕೊಂಡ ಎನ್ ಸಿಪಿಗೆ 3 ಸೀಟು

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಎನ್ ಸಿಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಇದರಿಂದಾಗಿ ರಾಜ್ಯದ ಒಟ್ಟು 182 ಸ್ಥಾನಗಳ ಪೈಕಿ 3 ಕ್ಷೇತ್ರಗಳಲ್ಲಿ ಎನ್ ಸಿಪಿ ಸ್ಪರ್ಧಿಸಲಿದೆ. ಉಭಯ ಪಕ್ಷಗಳ ಮುಖಂಡರು ಶುಕ್ರವಾರ ಇದನ್ನು ಪ್ರಕಟಿಸಿದ್ದಾರೆ.

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಎನ್ ಸಿಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಇದರಿಂದಾಗಿ ರಾಜ್ಯದ ಒಟ್ಟು 182 ಸ್ಥಾನಗಳ ಪೈಕಿ 3 ಕ್ಷೇತ್ರಗಳಲ್ಲಿ ಎನ್ ಸಿಪಿ ಸ್ಪರ್ಧಿಸಲಿದೆ. ಉಭಯ ಪಕ್ಷಗಳ ಮುಖಂಡರು ಶುಕ್ರವಾರ ಇದನ್ನು ಪ್ರಕಟಿಸಿದ್ದಾರೆ.

2017ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಎನ್ ಸಿಪಿಯ ಕಂಧಲ್ ಜಡೇಜಾ ಮಾತ್ರ ಗೆಲುವು ಸಾಧಿಸಿದ್ದರು. ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿಯೊಂದಿಗೆ ಎನ್ ಸಿಪಿ ಪೈಪೋಟಿ ನಡೆಸಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಹೇಳಿದರು. 

ಮೈತ್ರಿ ಭಾಗವಾಗಿ ಎನ್‌ಸಿಪಿ ಉಮ್ರೇತ್ (ಆನಂದ್ ಜಿಲ್ಲೆ) ನರೋಡಾ (ಅಹಮದಾಬಾದ್) ಮತ್ತು ದೇವಗಢ್ ಬರಿಯಾ (ದಹೋಡ್ ಜಿಲ್ಲೆ) ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಈ ಮೂವರು ಕ್ಷೇತ್ರಗಳು ಸದ್ಯ ಆಡಳಿತಾರೂಢ ಬಿಜೆಪಿ ವಶದಲ್ಲಿದೆ.  

ಯುಪಿಎ-1 ಮತ್ತು 2ರಲ್ಲಿ ರಾಷ್ಟ್ರಮಟ್ಟದಲ್ಲಿ ನಮ್ಮೊಂದಿಗಿದ್ದ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಿದ ಠಾಕೂರ್,  125 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಎನ್‌ಸಿಪಿ ಬೆಂಬಲ ನೀಡಲಿದೆ  ಎಂದು ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಟೇಲ್ ಬೋಸ್ಕಿ ಸುದ್ದಿಗಾರರಿಗೆ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT