ಸಂಗ್ರಹ ಚಿತ್ರ 
ದೇಶ

ಉತ್ತರ ಪ್ರದೇಶ: ತ್ರಿವಳಿ ತಲಾಖ್ ನೀಡಿ ಪತಿ, ಮೈದುನನಿಂದ ಸರಣಿ ಸಾಮೂಹಿಕ ಅತ್ಯಾಚಾರ!

ಮಹಿಳೆಯೊಬ್ಬರಿಗೆ ತ್ರಿವಳಿ ತಲಾಖ್ ನೀಡಿದ ಬಳಿಕ ಪತಿ, ಮೈದುನ ಮತ್ತು ಧರ್ಮಗುರು ಸೇರಿ ಹಲವರು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಶಹಜಹಾನ್‌ಪುರ: ಮಹಿಳೆಯೊಬ್ಬರಿಗೆ ತ್ರಿವಳಿ ತಲಾಖ್ ನೀಡಿದ ಬಳಿಕ ಪತಿ, ಮೈದುನ ಮತ್ತು ಧರ್ಮಗುರು ಸೇರಿ ಹಲವರು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಮಹಿಳೆ ನೀಡಿದ ದೂರಿನ ಅನ್ವಯ, ಐದು ವರ್ಷಗಳ ಹಿಂದೆ ಸಲ್ಮಾನ್ ಎಂಬಾತ ಮಹಿಳೆಯನ್ನು ಮದುವೆಯಾಗಿದ್ದ. ಕೆಲವು ತಿಂಗಳ ಹಿಂದೆ ಗುಡ್ಡು ಹಾಜಿ ಎಂಬ ಧರ್ಮಗುರುವಿನ ಸಲಹೆಯ ಮೇರೆಗೆ ಸಲ್ಮಾನ್ ತನ್ನ ಪತ್ನಿಗೆ ತ್ರಿವಳಿ ತಲಾಖ್ (ಭಾರತದಲ್ಲಿ ನಿಷೇಧ ಮತ್ತು ಕಾನೂನು ಬಾಹಿರ) ನೀಡಿದ್ದ. ನಂತರ ಮಹಿಳೆಗೆ ತನ್ನ ಕಿರಿಯ ಸಹೋದರನನ್ನು ಮದುವೆಯಾಗಿ ಬಳಿಕ ಆತನಿಗೂ ವಿಚ್ಛೇದನ ನೀಡಿದರೆ ಆ ಬಳಿಕ ಆಕೆಯನ್ನು ಮತ್ತೆ ತನ್ನ ಹೆಂಡತಿಯಾಗಿ ಸ್ವೀಕರಿಸುವುದಾಗಿ ಹೇಳಿದ್ದಾನೆ. 

ಆಕೆ ಆತನ ಮಾತನ್ನು ನಂಬಿ ಆತ ಹೇಳಿದಂತೆ ಪತಿಯಿಂದ ವಿಚ್ಚೇಧನ ಪಡೆದು ಬಳಿಕ ಆತನ ಸಹೋದರ ಇಸ್ಲಾಂನನ್ನು ಮದುವೆಯಾಗಿದ್ದಾಳೆ. ಬಳಿಕ ಆತನ ಸಹೋದರ ಇಸ್ಲಾಂ ಆಕೆಗೆ ತಲಾಖ್ ನೀಡಲು ನಿರಾಕರಿಸಿದ್ದು, ಮಾತ್ರವಲ್ಲದೇ ತನ್ನ ಅಣ್ಣ ಸಲ್ಮಾನ್ ನೊಂದಿಗೆ ಸೇರಿ ತನ್ನ ಅತ್ತಿಗೆಯ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ. ಮನೆಯಲ್ಲಿ ಆಕೆ ಇರುವಾಗ ಸಲ್ಮಾನ್ ಮತ್ತು ಇಸ್ಲಾಂ ಇಬ್ಬರೂ ನಿರಂತರವಾಗಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಸಲ್ಮಾನ್ ಮತ್ತು ಇಸ್ಲಾಂ ಮಾತ್ರವಲ್ಲದೇ ಇವರೊಂದಿಗೆ ಸ್ಥಳೀಯ ಧರ್ಮಗುರು ಗುಡ್ಡು ಹಾಜಿ ಎಂಬವವರೂ ಸೇರಿ ಹಲವಾರು ಸಂದರ್ಭಗಳಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ  ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ.

ಮಹಿಳೆ ತನ್ನ ದೂರಿನೊಂದಿಗೆ ಸ್ಥಳೀಯ ನ್ಯಾಯಾಲಯಕ್ಕೆ ಹೋಗಿದ್ದು, ಸೋಮವಾರ ನ್ಯಾಯಾಲಯದ ಆದೇಶದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ನಾವು ಗುಡ್ಡು ಹಾಜಿ, ಸಲ್ಮಾನ್, ಇಸ್ಲಾಂ ಮತ್ತು ಅವರ ಕುಟುಂಬದ ಮೂವರ ಮೇಲೆ ಗ್ಯಾಂಗ್ ರೇಪ್ (376 ಐಪಿಸಿ), ಅಸ್ವಾಭಾವಿಕ ಲೈಂಗಿಕ ಕ್ರಿಯೆ (377 ಡಿ ಐಪಿಸಿ) ಮತ್ತು ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆ-2019 ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT