ಬಿಜೆಪಿ ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್ ವಿಧಾನಸಭಾ ಚುನಾವಣೆ: 2ನೇ ಪಟ್ಟಿ ಘೋಷಣೆ ಬಳಿಕ ಬಿಜೆಪಿಯಲ್ಲಿ ಭುಗಿಲೆದ್ದ ಆಂತರಿಕ ಕಲಹ

ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಘೋಷಣೆ ಮಾಡಿದ ಬಳಿಕ ಆಂತರಿಕ ಕಲಹ ಭುಗಿಲೆದ್ದಿದೆ.

ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಘೋಷಣೆ ಮಾಡಿದ ಬಳಿಕ ಆಂತರಿಕ ಕಲಹ ಭುಗಿಲೆದ್ದಿದೆ.

ಶಾಸಕ ಕೇಸರಿಸಿಂಗ್ ಸೋಲಂಕಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ 48 ಗಂಟೆಗಳಲ್ಲಿ ವಾಪಸ್ಸಾಗಿದ್ದರೆ, ಶಾಸಕ ಜನ್ಖನಾ ಪಟೇಲ್ ಬದಲಿಗೆ ಸಂದೀಪ್ ದೇಸಾಯಿಗೆ ಟಿಕೆಟ್ ನೀಡಿದ್ದಕ್ಕೆ ಪಟೇಲ್ ಬೆಂಬಲಿಗರು ಸೂರತ್ ನ ಚೋರ್ಯಾಸಿಯಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ 6 ಮಂದಿಯ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಂಕಿ-ಅಂಶಗಳ ಪ್ರಕಾರ, ಜನ್ಖನಾ ಪಟೇಲ್, 2017 ರಲ್ಲಿ ದಾಖಲೆಯ ಮತಗಳ ಅಂತರದಲ್ಲಿ (1 ಲಕ್ಷ ಮತಗಳ) ಗೆಲುವು ಸಾಧಿಸಿದ್ದರು. ಇವರಿಗಿಂತ ಹೆಚ್ಚಿನ ಮತಗಳ ಅಂತರವನ್ನು ಸಿಎಂ ಭೂಪೇಂದ್ರ ಪಟೇಲ್ ಪಡೆದಿದ್ದರು.

 
ಗುಜರಾತ್ ನ ಸೂರತ್ ಪ್ರಾಂತ್ಯದಲ್ಲಿ ಬಿಜೆಪಿ, ಟಿಕೆಟ್ ಹಂಚಿಕೆ ಬಳಿಕ ಅತಿ ಹೆಚ್ಚು ಆಂತರಿಕ ಭಿನ್ನಮತ, ಕಲಹವನ್ನು ಎದುರಿಸುತ್ತಿದೆ. ಇಲ್ಲಿನ ಬಿಜೆಪಿ ನಾಯಕ ಯಜುವೇಂದ್ರ ದುಬೆ ಮಾತನಾಡಿ, ಹಿಂದಿ ಮಾತನಾಡುವ ಮತದಾರರು ಹಾಗೂ ಕೊಲಿ ಸಮುದಾಯದ ಮತದಾರರು ಚೊರ್ಯಾಸಿ ಕ್ಷೇತ್ರದಲ್ಲಿ ಪ್ರಬಲರಾಗಿದ್ದಾರೆ. ಜನ್ಖನ ಪಟೇಲ್ ಕೊಲಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆಕೆ ದಾಖಲೆಯ ಅಂತರದಲ್ಲಿ ಚುನಾವಣೆಯಲ್ಲಿ ಗೆದ್ದಿದ್ದರೂ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ನಮಗೆ ಕಾರಣ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಪಕ್ಷ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕೆಂದಿದ್ದರೂ ಜಾತಿಯ ಆಧಾರದಲ್ಲಿ ಟಿಕೆಟ್ ನ್ನು ನೀಡಬೇಕು ಬಹುಶಃ ಇದೇ ಕಾರಣಕ್ಕಾಗಿ ಸ್ಥಳೀಯ ಬಿಜೆಪಿ ನಾಯಕರು ಬಂಡಾಯವೆದ್ದಿದ್ದಾರೆ ಎಂದು ಹೇಳಿದ್ದಾರೆ. ಇನ್ನು ವರಚ್ಚಾದಲ್ಲಿಯೂ ಇದೇ ಮಾದರಿಯ ಪರಿಸ್ಥಿತಿ ಉಂಟಾಗಿದ್ದು, ಈ ಭಾಗದಲ್ಲಿ ಬಿಜೆಪಿ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಭಗ ಬರದ್ ಅವರಿಗೆ ಟಿಕೆಟ್ ನೀಡಿದೆ. ಈ ಬೆಳವಣಿಗೆ ಸ್ಥಳೀಯ ಬಿಜೆಪಿ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT